ರಿಪ್ಪನ್ಪೇಟೆ: ಸಮೀಪದ ಕೆಂಚನಾಲ (Kenchanala) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಮಜರೆ ಕಮದೂರು, ಮೂಡಾಗಲು, ಬಂಕಾಪುರ ಬಳಿ ಕಾಡಾನೆಗಳು (Elephants) ಲಗ್ಗೆಯಿಟ್ಟು ಅಡಿಕೆ, ಬಾಳೆ ತೋಟ ಧ್ವಂಸಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಆಲವಳ್ಳಿಯ ಮಲ್ಲಿಕಾರ್ಜುನ ಮತ್ತು ಮಲ್ಲೇಶ್ ಎಂಬುವರ ಅಡಿಕೆ ತೋಟಕ್ಕೆ ನುಗ್ಗಿ ಬಾಳೆ ಗಿಡವನ್ನು ಮುರಿದು ಹಾಕಿ ಸಾಕಷ್ಟು ನಷ್ಟ ಮಾಡಿವೆ. ಇನ್ನೂ ಬಂಕಾಪುರ, ಮೂಡಾಗಲು ಬಳಿಯ ಕಲ್ಲುಕೆರೆಯಲ್ಲಿ ನೀರು ಕುಡಿದು ನಾಗಾರ್ಜುನಸ್ವಾಮಿ ಎಂಬುವರ ಅಡಿಕೆ ತೋಟದಲ್ಲಿ ತಿರುಗಾಡಿರುವುದರೊಂದಿಗೆ ತೋಟದಲ್ಲಿನ ಹಸಿ ಹುಲ್ಲು ಮೇಯ್ದುಕೊಂಡು ತಂತಿ ಬೇಲಿ ದಾಟಿಕೊಂಡು ಸಂಪರ್ಕ ರಸ್ತೆಯಲ್ಲಿ ಹೋಗಿರುತ್ತವೆಂದು ಹೆಜ್ಜೆ ಗುರುತಿನಿಂದ ತಿಳಿಯಬಹುದಾಗಿದೆ.
ಮುಂಜಾನೆ ಎಂದಿನಂತೆ ರೈತ ನಾಗಾರ್ಜುನಸ್ವಾಮಿ ಮತ್ತು ಮಲ್ಲಿಕಾರ್ಜುನ ಮಲ್ಲೇಶ್ ಇವರು ತೋಟಕ್ಕೆ ಹೋಗಿ ನೋಡಲಾಗಿ ಆನೆಗಳು ದಾಳಿ ನಡೆಸಿರುವುದನ್ನು ದೃಢಪಡಿಸಿಕೊಂಡು ಅರಸಾಳು ಅರಣ್ಯ ಇಲಾಖೆಯವರಿಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…