Categories: Hosanagara News

ಜಾನಪದ ಸಾಹಿತ್ಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ; ಎಂ.ಎಂ. ಪರಮೇಶ್


ಹೊಸನಗರ: ಜನಪದ ಸಾಹಿತ್ಯಕ್ಕೆ ಲೇಖಕರಿಲ್ಲ ಬರಹಗಾರರಿಲ್ಲ ಹಳ್ಳಿಗರ ನುಡಿಯಿಂದ ನುಡಿದ ಹಾಡೇ ಜನಪದ ಗೀತೆಯ ಸಾಹಿತ್ಯವಾಗಿದೆ ಜನಪದ ಸಾಹಿತ್ಯ ಭಾರತ ದೇಶದಲ್ಲಿಯೇ ರಾಜ್ಯ ಪ್ರಥಮ ಸ್ಥಾನ ಪಡೆದಿದೆ ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ರಾಜ್ಯ ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಎಂ. ಪರಮೇಶ್‌ರವರು ಹೇಳಿದರು.


ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ತಾಲ್ಲೂಕು ಸಮಿತಿ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಫ್ರೌಡಶಾಲಾ ವಿದ್ಯಾರ್ಥಿಗಳಿಗೆ ಲಾವಣಿ ಮತ್ತು ಜಾನಪದ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಾನಪದ ಹುಟ್ಟು ಹಳ್ಳಿಗಳಲ್ಲಿ ಜನರ ಬಾಯಿಯಿಂದ ಬಾಯಿಗೆ ಒಂದು ಕುಟುಂಬ ವರ್ಗದವರಿಗೆ ಒಂದು ಊರಿನಿಂದ ಜಾನಪದ ಸಾಹಿತ್ಯ ರಚನೆಯಾಗಿದೆಯೇ ಹೊರತು ಯಾವುದೇ ಬರಹಗಾರರಿಂದ ರಚನೆಯಾಗಿಲ್ಲ ಜಾನಪದ ಸಾಹಿತ್ಯ ಅನೇಕ ಸವಕಲುಗಳನ್ನು ಹೊಂದಿದ್ದು ಜನರಿಂದ ಜನರಿಗಾಗಿ ಹುಟ್ಟಿರುವ ಈ ಸಾಹಿತ್ಯ ಈ ಜಾನಪದ ಸಾಹಿತ್ಯ ಅಂತ್ಯವಾಗಬೇಕಾದರೆ ಮನುಷ್ಯ ಜನ್ಮ ನಾಶವಾದಾಗ ಮಾತ್ರ ಸಾಧ್ಯ ಎಲ್ಲ ಸಾಹಿತ್ಯಗಳಿಗೂ ಕೊನೆ ಇದೆ ಆದರೆ ಈ ಸಾಹಿತ್ಯಕ್ಕೆ ಕೊನೆಯಿಲ್ಲ ಜಾನಪದದಲ್ಲಿ ಮನುಷ್ಯನು ತಿಳಿದುಕೊಳಬಹುದಾದ ಅನೇಕ ವಿಷಯಗಳಿದ್ದು ಅದನ್ನು ಪ್ರತಿಯೊಬ್ಬರು ಬೇಕಾಗಿರುವ ಹಾಡುಗಳನ್ನು ಕವನಗಳನ್ನು ತಿಳಿದುಕೊಳ್ಳುವ ಮೂಲಕ ಜಾನಪದ ಸಾಹಿತ್ಯವನ್ನು ಪ್ರಪಂಚದ ತುಂಬಾ ಹಬ್ಬಿಸಬೇಕೆಂದು ಈ ಮೂಲಕ ಕೇಳಿಕೊಂಡರು.


ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ|| ಕೆ.ಜಿ ವೆಂಕಟೇಶ್‌ರವರು ಜಾನಪದದ ಬಗ್ಗೆ ಉಪನ್ಯಾಸ ನೀಡಿ, ಜಾನಪದ ಸಾಹಿತ್ಯ ಅಂತ್ಯವಿಲ್ಲ ಆರಂಭವೂ ಇಲ್ಲೆಂಬುವುದರ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಮಕೃಷ್ಣ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ಡಿ.ಎಂ. ದೇವರಾಜ್‌ರವರು ಉದ್ಘಾಟಿಸಿ ಜಾನಪದ ಸಾಹಿತ್ಯದ ಬಗ್ಗೆ ವಿವರಿಸಿದರು.


ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ತ.ಮ.ನರಸಿಂಹ, ಕನ್ನಡ ಸಾಹಿತ್ಯ, ಸಾಂಸ್ಕೃತೀಕ ವೇದಿಕೆಯ ಅಧ್ಯಕ್ಷ, ಪತ್ರಕರ್ತ ನಗರ ರಾಘವೇಂದ್ರ, ವರ್ತಕರ ಸಂಘದ ಅಧ್ಯಕ್ಷರಾದ ವಿಜೇಂದ್ರ ಶೇಟ್, ನಾಗೇಶ ಕೆ.ಜಿ, ರಾಧಿಕ ರತ್ನಾಕರ್ ಶ್ರೇಷ್ಠಿ, ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಉಪಾಧ್ಯಯರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.


ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳಿಂದ ನಾಡಗೀತೆ ಪ್ರಾರ್ಥನೆ ಮಾಡಲಾಗಿದ್ದು ಸ್ವಾಗತವನ್ನು ವರ್ತಕರ ಸಂಘದ ಅಧ್ಯಕ್ಷರಾದ ವಿಜೇಂದ್ರ ಶೇಟ್‌ರವರು ಮಾಡಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago