ಜೆಜೆಎಂ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಶ್ರಮಿಸಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ: ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಿದ್ದು ಈ ಯೋಜನೆಯಡಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬರುವೆ, ಗವಟೂರು, ಕೆರೆಹಳ್ಳಿ, ಮುಗುಟಿಕೊಪ್ಪ ಗ್ರಾಮಗಳ ವ್ಯಾಪ್ತಿಗೆ 9 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ರಿಪ್ಪನ್‌ಪೇಟೆಯ ವಿವಿಧ ಬಡಾವಣೆಗಳ ವ್ಯಾಪ್ತಿಗೆ ಜಲಜೀವನ್ ಯೋಜನೆಯಡಿ 9 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ವಿನಾಯಕ ವೃತ್ತದಲ್ಲಿ ಆಯೋಜಿಸಲಾದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಚಕ್ರನಗರದಿಂದ ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಸರ್ಕಾರ 417 ಕೋಟಿ ರೂ‌. ಅನುದಾನವನ್ನು ಬಿಡುಗಡೆ ಮಾಡಿದೆ. ಈ ಯೋಜನೆಯ ಸಮಗ್ರ ಅನುಷ್ಟಾನಕ್ಕೆ ಅಧಿಕಾರಿಗಳು ಶ್ರಮಿಸುವಂತೆ ಹೇಳಿ, ಎಷ್ಟೇ ದೂರವಿದ್ದರೂ ಕೂಡಾ ಕಾಮಗಾರಿ ಮಾಡಬೇಕು ಐಎಸ್‌ಐ ಮಾರ್ಕ್‌ನ ಉಪಕರಣಗಳನ್ನು ಬಳಸಬೇಕು ಕಳಪೆ ಗುಣಮಟ್ಟದ ಪೈಪ್‌ಗಳನ್ನು ಬಳಸಿರುವುದು ಕಂಡರೆ ತಕ್ಷಣ ನನ್ನ ಗಮನಕ್ಕೆ ತರುವಂತೆ ಗ್ರಾಮಸ್ಥರಿಗೆ ತಿಳಿಸಿದರು.

ಜನ ಮತಹಾಕುವ ಮೂಲಕ ನನಗೆ ಆಶೀರ್ವದಿಸಿದ್ದಾರೆ. ಅವರ ಋಣ ತೀರಿಸಬೇಕಾಗಿದೆ. ಅಭಿವೃಧ್ಧಿ ವಿಚಾರದಲ್ಲಿ ಪಕ್ಷ ಬೇಧ ಮರೆತು ಕೆಲಸ ಮಾಡುವುದಾಗಿ ಹೇಳಿ, ಮುಂದಿನ ದಿನಗಳಲ್ಲಿ ಈಗಾಗಲೇ ಆನಂದಪುರ ಮಾರ್ಗದ ರಸ್ತೆಯ ಅಗಲೀಕರಣ ಕಾಮಗಾರಿ ಪ್ರಾರಂಭವಾಗಿದ್ದು ಇದರೊಂದಿಗೆ ತೀರ್ಥಹಳ್ಳಿ ರಸ್ತೆಯ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕೊಡಿಸುವುದರೊಂದಿಗೆ ಶಿವಮೊಗ್ಗ – ಹೊಸನಗರ ರಸ್ತೆಗೂ ಅನುದಾನವನ್ನು ಕೊಡಿಸುವುದಾಗಿ ಭರವಸೆ ನೀಡಿದರು.

ನಾನು ಕಳೆದ ಹತ್ತು ವರ್ಷ ಕಾಲ ಅಧಿಕಾರವಿಲ್ಲದೇ ವನವಾಸ ಅನುಭವಿಸುವಂತಾದರೂ ಕೂಡಾ ಧೃತಿಗೆಡದೆ ಸದಾ ಜನರ ಜೊತೆ ಇದ್ದು ಅವರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಪ್ರೀತಿ ವಿಶ್ವಾಸಗಳಿಸಿದರ ಪರಿಣಾಮದಿಂದಾಗಿ ಈ ಬಾರಿ ನನ್ನ ಆಯ್ಕೆ ಮಾಡಿದ್ದೀರ ಆ ಕಾರಣ ನಾನು ನಿಮ್ಮ ಯಾವುದೇ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಹೇಳಿ, ನನ್ನ ಬಳಿ ಬರಲು ಯಾರನ್ನು ಅವಲಂಭಿಸುವುದು ಬೇಡಾ ನೇರವಾಗಿ ಬರುವಂತೆ ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಡಿ.ಈ.ಮಧುಸೂದನ್, ಗಣಪತಿ, ಆಶೀಫ್, ಪ್ರಕಾಶ ಪಾಲೇಕರ್, ವಿನೋಧ, ಮಹಾಲಕ್ಷ್ಮಿ, ಎನ್.ಚಂದ್ರೇಶ್, ಸುಂದರೇಶ್, ಜಿ.ಡಿ.ಮಲ್ಲಿಕಾರ್ಜುನ, ಅನುಪಮಾ ರಾಕೇಶ್, ದಾನಮ್ಮ, ಅಶ್ವಿನಿ ರವಿಶಂಕರ್, ಸಾರಾಭಿ, ತಹಶೀಲ್ದಾರ್ ರಶ್ಮಿ, ಲೋಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನ, ಪಿಎಸ್‌ಐ ಪ್ರವೀಣ್‌ಕುಮಾರ್, ಪಿಡಿಓ ಮಧುಸೂದನ್, ಇನ್ನಿತರರು ಪಾಲ್ಗೊಂಡಿದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

8 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

8 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

10 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

13 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

15 hours ago