Categories: Hosanagara News

ತಳ ಹಂತದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ವಿಶೇಷ ತಂಡ ರಚನೆ ; ಕಲಗೋಡು ರತ್ನಾಕರ್


ಹೊಸನಗರ: ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಪೈಕಿ 23 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಡಿ ಸದಸ್ಯ ಕಲಗೋಡು ರತ್ನಾಕರ ಹೇಳಿದರು.


ಅವರು ಮಾರುತಿಪುರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದ್ದು, ಈ ಹಿಂದಿಗಿಂತಲೂ ಹೆಚ್ಚು ಕಡೆಗಳಲ್ಲಿ ಅಧಿಕಾರ ಪಡೆದುಕೊಂಡಿದೆ. ಇದು ಜನತೆ ಬಿಜೆಪಿಯಿಂದ ಬೇಸತ್ತು ಕಾಂಗ್ರೆಸ್ ಅನ್ನು ನೆಚ್ಚಿಕೊಂಡಿದ್ದಾರೆ ಎನ್ನುವುದನ್ನು ಸಾಬೀತು ಪಡಿಸಿದೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ‍್ಯವನ್ನು ಕಾರ‍್ಯಕರ್ತರು ಮಾಡುತ್ತಿದ್ದಾರೆ. ಉತ್ತಮ ಆಡಳಿತ ರಾಜ್ಯದ ಜನತೆಯ ಪಾಲಿಗೆ ಸಿಗಲಿದೆ. ತಳ ಹಂತದಲ್ಲಿ ಪಕ್ಷ ಗೆಲುವು ಸಾಧಿಸುತ್ತಿರುವುದು ಪಕ್ಷ ಸಂಘಟನೆಗೆ ಸಹಕಾರಿಯಾಗಿದೆ ಎಂದರು.


ಈ ಹಿಂದಿನ 5 ವರ್ಷದ ಬಿಜೆಪಿ ಆಡಳಿತದಲ್ಲಿ ಹೊಸನಗರ ತಾಲೂಕಿನಲ್ಲಿ ಅಭಿವೃದ್ಧಿಗೆ ಹಿನ್ನೆಡೆ ಉಂಟಾಗಿತ್ತು. ಪಟ್ಟಣದಲ್ಲಿ 110 ಕೆ.ವಿ ವಿದ್ಯುತ್ ಸ್ಥಾವರ, ಹರಿದ್ರಾವತಿಯಲ್ಲಿ 33 ಕೆವಿ ವಿದ್ಯುತ್ ಸ್ಥಾವರ, ರಿಪ್ಪನ್‌ಪೇಟೆ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಇದರಿಂದ ಜನತೆ ಸಂಕಷ್ಟ ಪಡುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಆಡಳಿತಕ್ಕೆ ಚುರುಕು ಮುಟ್ಟಿಸುವ ಕಾರ‍್ಯ ಮುಂದಿನ ದಿನಗಳಲ್ಲಿ ಆಗಲಿದೆ ಎಂದರು.


ಮುಂಬರುವ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಪ್ರತ್ಯೇಕ ಕಾರ‍್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಪಕ್ಷ ಸಂಘಟನೆಗಾಗಿಯೇ ವಿಶೇಷ ತಂಡ ರಚಿಸಲಾಗಿದೆ. ಲೋಕಸಭಾ ಚುನಾವಣೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.

ಮಾರುತಿಪುರ ಗ್ರಾಮ ಪಂಚಾಯತಿಗೆ ನೂತನವಾಗಿ ಅಧ್ಯಕ್ಷರಾಗಿ ದೀಪಿಕಾ ಹಾಗೂ ಉಪಾಧ್ಯಕ್ಷರಾಗಿ ಶಂಕರಶೆಟ್ಟಿಯವರು ಆಯ್ಕೆಯಾಗಿದ್ದು ಅವರನ್ನು ಜಿ.ಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅಭಿನಂದಿಸುತ್ತಿರುವುದು.


ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರ ವಿಂಗಡಣೆ ಕಾರ‍್ಯ ಮುಕ್ತಾಯಗೊಂಡಿಲ್ಲ. ಕರಾವಳಿ ಜಿಲ್ಲೆಯ ಮಾದರಿಯಲ್ಲಿ ಹೊಸನಗರ, ಸಾಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕುಗಳಿಗೂ ಹೆಚ್ಚಿನ ಜಿಲ್ಲಾ ಪಂಚಾಯಿತಿ ಸ್ಥಾನ ರಚನೆಗೆ ಮನವಿ ನೀಡಲಾಗಿದೆ ಎಂದರು.


ಈ ವೇಳೆ ಪಕ್ಷದ ತಾಲೂಕು ಅಧ್ಯಕ್ಷ ಬಿ.ಜಿ.ನಾಗರಾಜ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಜಿ.ಚಂದ್ರಮೌಳಿ, ಎರಗಿ ಉಮೇಶ್, ಗ್ರಾಪಂ ಅಧ್ಯಕ್ಷೆ ದೀಪಿಕಾ, ಉಪಾಧ್ಯಕ್ಷೆ ಶಂಕರಶೆಟ್ಟಿ, ಸದಸ್ಯ ಚಿದಂಬರ್ ಎಚ್.ಬಿ. ಪ್ರಕಾಶ್, ಅವಿನಾಶ್ ಮತ್ತಿತರರು ಇದ್ದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

22 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

23 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

23 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

1 day ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

1 day ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

1 day ago