Categories: Hosanagara News

ದಣಿವರಿಯದೇ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ; ಬಿಎಸ್‌ವೈ ಕಾರ‍್ಯಕರ್ತರಿಗೆ ಕರೆ

ಹೊಸನಗರ : ಬಿಜೆಪಿ ಸರಕಾರ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು.


ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ‍್ಯಕರ್ತರ ಮೇಲೆ ಅವಲಂಬಿತವಾಗಿದೆ. ಹೇಗೆ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೇ, ದೇಶಕ್ಕಾಗಿ ಶ್ರಮಿಸುತ್ತಿರುವರೋ ಅದೇ ರೀತಿಯಲ್ಲಿ ಅವರ ಹೆಸರನ್ನು ಹೆಮ್ಮೆಯಿಂದ ಹೇಳುವ ಕಾರ‍್ಯಕರ್ತರು ಸಹಾ ಚುನಾವಣೆಯಲ್ಲಿ ದಣಿವರಿಯದೇ ಕೆಲಸ ಮಾಡಿದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.


ಬಿಜೆಪಿ ಮಹಿಳೆಯರಿಗೆ ವಿಶೇಷ ಪ್ರಾಧಾನ್ಯತೆ ನೀಡಿದೆ. ದೇಶದ ರಾಷ್ಟ್ರಪತಿ, ಹಣಕಾಸು ಸಚಿವ ಸ್ಥಾನ ಸಹಾ ಮಹಿಳೆಯ ಕೈಯಲ್ಲಿರುವುದು ಇದಕ್ಕೆ ಸಾಕ್ಷಿ. ಒಂದು ಕಾಲದಲ್ಲಿ ಹಣ, ಹೆಂಡ, ತೋಳ್ಬಲ, ಜಾತಿಯನ್ನು ಮುಂದಿಟ್ಟು ಚುನಾವಣೆ ಮಾಡಿ ಕೆಲವರು ಗೆಲವು ಸಾಧಿಸುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದೆ. ಅನ್ಯಾಯವನ್ನು ಸಹಿಸಿಕೊಳ್ಳಲು ಯಾರೂ ತಯಾರಿಲ್ಲ. ಯುವ ಜನತೆ ಎಚ್ಚೆತ್ತುಕೊಂಡಿದೆ. ಕಾಂಗ್ರೆಸ್ ಪಕ್ಷದ ನಾಯಕರು ಮುಂದಿನ ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಟ್ಟುಕೊಂಡಿದ್ದಾರೆ ಎಂದು ಈ ಹಿಂದೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರೇ ಹೇಳಿದ್ದರು ಎಂದು ಆರೋಪಿಸಿದರು.


ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವ ಹಂತ ತಲುಪಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಮುಕ್ತ ಮಾಡುವ ಕಾಲ ಸನ್ನಿಹಿತವಾಗಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ವಿತರಣೆ ಮಾಡುವ ಮೂಲಕ ಜನರಿಗೆ ಪೊಳ್ಳು ಆಶ್ವಾಸನೆ ನೀಡುತ್ತಿದೆ. ಅವರು ನೀಡಿರುವ ಗ್ಯಾರಂಟಿಗಳನ್ನು ಪೂರೈಸಲು ಬೇಕಾಗುವ ಹಣಕಾಸು ರಾಜ್ಯದ ಒಟ್ಟಾರೆ ಬಜೆಟ್‌ನ ಮೊತ್ತಕ್ಕಿಂತಲೂ ಅಧಿಕವಾಗಿದೆ. ಹಾಗಾಗಿ ಇದು ಜನರನ್ನು ಮೋಸಗೊಳಿಸುವ ಯತ್ನ ಎಂದು ಟೀಕಿಸಿದರು.


ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಚುನಾವಣೆ ಒಂದು ಯುದ್ಧವಿದ್ದಂತೆ. ಬಸವರಾಜ ಬೊಮ್ಮಾಯಿ ಅವರು ಅರ್ಜುನನ ಪಾತ್ರ ವಹಿಸಿದ್ದರೆ, ಯಡಿಯೂರಪ್ಪ ಅವರು ಶ್ರೀಕೃಷ್ಣನ ಪಾತ್ರ ವಹಿಸಿದ್ದಾರೆ. ಗೆಲುವು ನಮ್ಮದೇ, ಮುಂದಿನ ಅವಧಿಗೂ ಬಿಜೆಪಿ ಅಧಿಕಾರ ಶತಸ್ಸಿದ್ಧ. ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ‍್ಯಗಳು ಆಗಿವೆ. ಮತದಾರರು ಇದನ್ನು ಗಮನಿಸಿ ತಮ್ಮನ್ನು ಮತ್ತೊಮ್ಮೆ ಬೆಂಬಲಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.


ಮಾಜಿ ಶಾಸಕ ಬಿ.ಸ್ವಾಮಿರಾವ್, ಪ್ರಮುಖರಾದ ಡಾ. ರಾಜನಂದಿನಿ ಕಾಗೋಡು, ಕೆ.ಎಸ್.ಪ್ರಶಾಂತ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಗಣಪತಿ ಬಿಳಗೋಡು, ಲೋಕನಾಥ ಬಿಳಿಸಿರಿ, ರಾಘವೇಂದ್ರ ಬಾಳೆಬೈಲು, ಗಣೇಶಪ್ರಸಾದ್, ಉಮೇಶ ಕಂಚುಗಾರ್, ಎಂ.ಎನ್.ಸುಧಾಕರ, ಎನ್.ಆರ್.ದೇವಾನಂದ, ಎ.ವಿ.ಮಲ್ಲಿಕಾರ್ಜುನ, ಮನೋಧರ, ವೀರೇಶ್ ಮತ್ತಿತರರು ಇದ್ದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

4 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

15 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

20 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago