ಹೊಸನಗರ: ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರು ದತ್ತು ಶಾಲೆ ಪರವಾಗಿ ಹೇಳಿಕೆ ನೀಡಿರುವುದು ಬಾಲಿಶವಾಗಿದೆ. ಶಾಸಕರ ಮಾದರಿ ಶಾಲೆಯಾಗಿರುವ ಈ ಶಾಲೆಯ ಬಗ್ಗೆ ಈ ಸದಸ್ಯರಿಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶ್ವಿನಿ ಕುಮಾರ್ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೂಲಂಕುಶವಾಗಿ ವಿವರಿಸಿ, ನಿನ್ನೆ ನಡೆದ ಪಟ್ಟಣ ಪಂಚಾಯತಿ ಸಭೆಯಲ್ಲಿ ಸದಸ್ಯರುಗಳ ಹೇಳಿಕೆಯನ್ನು ಕಂಡ ತುಂಡವಾಗಿ ತಿರಸ್ಕರಿಸಿದರು.
ಈ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವನ್ನು ನಡೆಸಿದ್ದು ಪಟ್ಟಣದ ಜನರ ಮೆಚ್ಚುಗೆಯನ್ನು ಗಳಿಸಿದೆ. ಪಟ್ಟಣ ಪಂಚಾಯಿತಿ ಎಲ್ಲಾ ಚುನಾಯಿತ ಸದಸ್ಯರಿಗೂ ಶಾಲಾ ವಾರ್ಷಿಕೋತ್ಸವದ ಕರೆಯೋಲೆ ಪತ್ರಿಕೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರುಗಳಿಂದ ತಲುಪಿಸಿದ್ದರು ಕೂಡ ಕೆಲ ಸದಸ್ಯರು ಸಭೆಯಲ್ಲಿ ಪತ್ರಿಕೆ ತಲುಪದ ಬಗ್ಗೆ ಆರೋಪ ಮಾಡಿದ್ದು ಸರಿಯಲ್ಲ. ಪಟ್ಟಣ ಪಂಚಾಯಿತಿಯ ಶಾಸಕರ ಮಾದರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದರು ಶಾಲೆಗೆ ಕಳಪೆ ಗುಣಮಟ್ಟದ ಬಣ್ಣ ಮಾಡಿಸುವುದನ್ನು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕೈಗೊಂಡಿಲ್ಲ. ಈಗ ಕುಡಿಯುವ ನೀರಿಗೂಸಹ ತೀವ್ರ ಸಮಸ್ಯೆ ಎದುರಿಸುವಂತಾಗಿದೆ.
ಸರ್ಕಾರದ ಯಾವುದೇ ಅನು ದಾನವಿಲ್ಲದಿದ್ದರೂ ಸಾರ್ವಜನಿಕರ ಹಳೆ ವಿದ್ಯಾರ್ಥಿಗಳು ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಸಾರ್ವಜನಿಕರ ನೆರವಿನಿಂದ ಶಾಲೆಯ ಗುಣಮಟ್ಟವನ್ನು ಉನ್ನತ ಮಟ್ಟಕ್ಕೆ ಕೊಂಡಯ್ಯಲಾಗಿದೆ ಎಂದು ಅವರು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರೋಹಿಣಿ, ದೀಪಕ್ ಸ್ವರೂಪ್, ಸದಸ್ಯರುಗಳಾದ ಚಂದ್ರಶೇಖರ್, ಗೌತಮ್, ಸತ್ಯನಾರಾಯಣ, ನಾಸಿರ್, ಜಯಲಕ್ಷ್ಮಿ, ಮಂಜುನಾಥ್, ಶೈಲಜಾ, ಸತ್ಯನಾರಾಯಣ, ರೆಹಮದ್ ಫಯಾಜ್ ಉಪಸ್ಥಿತರಿದ್ದರು.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…