Categories: Hosanagara News

ದಿ|| ದೇವರಾಜ ಅರಸುರವರ ಚಿಂತನೆ, ಸಾಧನೆಯನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು


ಹೊಸನಗರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ||ದೇವರಾಜ ಅರಸುರವರ ಚಿಂತನೆ ಸಾಧನೆಗಳನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಹಿರಿಯರು ಅದನ್ನು ಹೇಳಿ ತಲುಪಿಸುವ ಕೆಲಸ ಮಾಡಬೇಕು ಎಂದು ನಾಡಹಬ್ಬಗಳ ಸಮಿತಿಯ ಸದಸ್ಯರಾದ ಹೆಚ್. ಶ್ರೀನಿವಾಸ್ ಕಾಮತ್‌ರವರು ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದಿ|| ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪೂಜೆ ಸಲ್ಲಿಸಿ ಮಾತನಾಡಿದ ಅವರು, ಇವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾಗ ರಾಜ್ಯ ಸಂಪೂರ್ಣ ಸುಭಿಕ್ಷೆಯಿಂದ ಕೂಡಿತ್ತು ಇವರು ಬಡವರಿಗಾಗಿ ಹಾಗೂ ಹಿಂದುಳಿದ ಜನರಿಗಾಗಿ ಅನೇಕ ಹೊಸ-ಹೊಸ ಯೋಜನೆಗಳನ್ನು ಜಾರಿಗೆ ತಂದು ಹಿಂದುಳಿದ ಜನಾಂಗದ ಜನನಾಯಕರಾಗಿದ್ದಾರೆ ಉಳುವವನೇ ಭೂಮಿಯ ಒಡೆಯ ಎನ್ನುವುದು ಬಡವರ ರೈತರ ಪಾಲಿಗೆ ಉತ್ತಮವಾದ ಯೋಜನೆಯಾಗಿತ್ತು.
ಇವರು ಸ್ವಾಭಿಮಾನ ಮತ್ತು ಹೋರಾಟದ ಶಕ್ತಿಯಾಗಿದ್ದು ಬೆಳೆಸಿಕೊಂಡವರು. ಹೋರಾಟದ ಛಲವನ್ನು ಮೈಗೂಡಿಸಿಕೊಂಡಿರುವುದರಿಂದಲೇ ಎಲ್ಲ ಹಿತಾಸಕ್ತಿಗಳನ್ನು ಬದಿಗೊತ್ತಿ ಕೆಲಸ ಮಾಡಿದ್ದರಿಂದ ಜನನಾಯಕರೆನಿಸಿಕೊಂಡಿದ್ದಾರೆ ಎಂದರು.


ಈ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಚುನಾವಣೆ ಶಿರಾಸ್ಥೆದಾರ್ ಸತೀಶ್, ನಾಡಹಬ್ಬಗಳ ಸಮಿತಿಯ ಸದಸ್ಯ ಎನ್ ಶ್ರೀಧರ ಉಡುಪ, ಬಿ.ಸಿ.ಎಂ ಹಾಸ್ಟೆಲ್ ಪ್ರಥಮ ದರ್ಜೆ ಗುಮಾಸ್ಥ ನಟರಾಜ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುಲಾಬಿ ಮರಿಯಪ್ಪ, ಕೃಷ್ಣವೇಣಿ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ವಾರ್ಡನ್ ಕಲಾವತಿ, ಪಟ್ಟಣ ಪಂಚಾಯತಿ ಆರೋಗ್ಯ ಇಲಾಖೆಯ ಪ್ರಶಾಂತ್, ವಿವಿಧ ಇಲಾಖೆಯ ಅಧಿಕಾರಿಗಳ ವರ್ಗ ನೌಕರರ ವರ್ಗ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago