Categories: Hosanagara News

ದುರಸ್ಥಿ ಕಾಣದ ರಸ್ತೆ ; ಗ್ರಾಮಸ್ಥರಿಂದ ಪ್ರತಿಭಟನೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸನಗರ: ತಾಲ್ಲೂಕಿನ ಮೇಲನಬೆಸಿಗೆ ಹಾಗೂ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ವಸವೆ ರಸ್ತೆ ಹಾಳಾಗಿ ಸುಮಾರು 10 ವರ್ಷಗಳು ಕಳೆದಿದೆ. ಹಿಂದಿನ ವಿಧಾನಸಭೆಯ ಚುನಾವಣೆಯಲ್ಲಿ ಗೃಹಸಚಿವರಾದ ಆರಗ ಜ್ಞಾನೇಂದ್ರರವರು ಹಾಗೂ ಹೊಸನಗರ ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರು ಚುನಾವಣೆ ನಡೆದು ಗೆದ್ದ ತಕ್ಷಣ ವಸವೆ ರಸ್ತೆಯ ರಿಪೇರಿಗೆ ಮೊದಲ ಆಧ್ಯತೆ ನೀಡಿ ರಸ್ತೆ ಕಾಮಗಾರಿ ಮಾಡಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದು ಆಶ್ವಾಸನೆ ಮರೀಚಿಕೆಯಾಗಿ ಉಳಿದಿದ್ದು ಇನ್ನೂ ಒಂದು ತಿಂಗಳಲ್ಲಿ ಚುನಾವಣೆ ಬರುತ್ತದೆ ಅವರು ಆಶ್ವಾಸನೆ ನೀಡಿದ ಭರವಸೆ ಈಡೆರಿಸಿಲ್ಲವೆಂದು ಗ್ರಾಮ ಪಂಚಾಯಿತಿ ಸದಸ್ಯ ಧರ್ಮಪ್ಪನವರ ನೇತೃತ್ವದಲ್ಲಿ ಕರಿನಗೊಳ್ಳಿಯಿಂದ ವಸವೆಗೆ ಹೋಗುವ ಮುಖ್ಯರಸ್ತೆಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ಪ್ರತಿಭಟನೆ ಧರಣಿಯ ನೇತೃತ್ವವಹಿಸಿದ ಧರ್ಮಪ್ಪನವರು ಮಾತನಾಡಿ ವಸವೆ ಗ್ರಾಮದ ಗ್ರಾಮಸ್ಥರಾದ ನಾವು ಸುಮಾರು 10 ವರ್ಷಗಳಿಂದ ಕರಿನಗೊಳ್ಳಿಯಿಂದ ವಸವೆ ಮುಖ್ಯ ರಸ್ತೆಯನ್ನು ದುರಸ್ಥಿ ಮಾಡಲು ಸಾಕಷ್ಟು ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೂ ದುರಸ್ಥಿ ಮಾಡದೇ ಹಾಗೆಯೇ ಬಿಟ್ಟಿರುತ್ತಾರೆ. ನಮ್ಮ ಗ್ರಾಮಕ್ಕೆ ರಸ್ತೆಯ ಮಾರ್ಗ ಇರುವುದಿಲ್ಲ. ಆದ್ದರಿಂದ ಎರಡು ಗ್ರಾಮದ ವಸವೆ ಮತ್ತು ಕರಿನಗೊಳ್ಳಿ ಮುಖ್ಯ ರಸ್ತೆಯಲ್ಲಿ ಧರಣಿ ಸತ್ಯಗ್ರಹ ನಡೆಸಲು ತೀರ್ಮಾನಿಸಲಾಗಿದ್ದು ಅದರಂತೆ ದೇವರಸಲಿಕೆ ವಸವೆ ಮುಖ್ಯ ರಸ್ತೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತೀದ್ದೇವೆ. ನಂತರ ಹೊಸನಗರದ ತಾಲ್ಲೂಕು ಕಛೇರಿಗೆ ನಮ್ಮ ರಸ್ತೆಯ ಬೇಡಿಕೆಯಾಗಿ ಮನವಿ ಪತ್ರ ಸಲ್ಲಿಸಲಿದ್ದೇವೆ ಎಂದರು.

ಚುನಾವಣೆ ಬಹಿಷ್ಕಾರ:
ಹೊಸನಗರ ತಾಲ್ಲೂಕು ಕಛೇರಿಯ ಗ್ರೇಡ್ 2 ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ದೇವರ ಸಲಿಕೆಯ ಗ್ರಾಮಸ್ಥರಾದ ಕೇಶವಪ್ಪ ಗೌಡ ಮಾತನಾಡಿ, ನಾವು ಸುಮಾರು 10ವರ್ಷಗಳಿಂದ ವಸವೆ – ದೇವರಸಲಿಕೆ ರಸ್ತೆಯ ದುರಸ್ಥಿಗಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ ನಮಗೆ ಬರೀ ಆಶ್ವಾಸನೆಯಲ್ಲಿಯೇ ರಾಜಕೀಯ ನಾಯಕರು ಕಳೆಯುತ್ತಿದ್ದಾರೆ. ಒಂದು ಕೋಟಿ ರೂ. ಮಂಜೂರಾತಿ ಮಾಡಿದ್ದೇವೆ ಒಂದೂವರೆ ಕೋಟಿ ರೂ. ಮಂಜೂರಾತಿ ಮಾಡಿದ್ದೇವೆ ಎಂಬ ಸುಳ್ಳು ಆಶ್ವಾಸನೆಯಲ್ಲಿಯೇ ಕಾಲ ಕಳೆದಿದ್ದು ಆದರೆ ಇಲ್ಲಿಯವರೆಗೆ ರಸ್ತೆಯ ದುರಸ್ಥಿಯ ಭಾಗ್ಯ ಕಂಡಿಲ್ಲ. ಮುಂದೆ ಬರುವ ವಿಧಾನಸಭೆಯ ಚುನಾವಣೆಯ ಒಳಗೆ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೇ ವಿಧಾನಸಭಾ ಚುನಾವಣೆ ಹಾಗೂ ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನಮ್ಮ ಗ್ರಾಮಸ್ಥರು ತೀರ್ಮಾನಿಸಿದ್ದು ಅದರಂತೆ ಮೂರು ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದರು.


ಈ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ಥರಾದ ಬಸವಣ್ಯಪ್ಪ ಗೌಡ, ಕೀರ್ತಿಗೌಡ ಗೌಡ, ಚನ್ನಬಸಪ್ಪ, ಕೌಶಿಕ್, ರಮೇಶ್, ಕೃಷ್ಣಮೂರ್ತಿ ಎಸ್,ಸಿ, ನಾಗರಾಜ್ ಗೌಡ, ಕೇಶವಪ್ಪ ಗೌಡ, ಗಣೇಶ್, ಸುರೇಶ್ ಇನ್ನೂ ಮುಂತಾದವರು ಪ್ರತಿಭಟನೆ ಧರಣಿಯಲ್ಲಿ ಭಾಗವಹಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

10 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

14 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

17 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

17 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago