ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತವಾಗಲಿ ; ಶ್ರೀಗಳು

ರಿಪ್ಪನ್‌ಪೇಟೆ: ಜೀವನವನ್ನು ಹಿಂದೆ ನೋಡಿ ತಿಳಿದುಕೊಳ್ಳಬೇಕು. ಮುಂದೆ ನೋಡಿ ಬದುಕಬೇಕು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯರು ಅಯೋಜಿಸಲಾದ ಇಷ್ಟಲಿಂಗ ರುದ್ರಾಭಿಷೇಕ ಹಾಗೂ ಅರ್ಚನೆಯ ಪ್ರಯುಕ್ತವಾಗಿ ಹಮ್ಮಿಕೊಂಡ ಧರ್ಮಸಮಾರಂಭದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ, ಮುಖದಲ್ಲಿ ನಗುವಿರಲಿ. ಹೃದಯದಲ್ಲಿ ಪ್ರೀತಿ ಇರಲಿ. ಜೀವನದಲ್ಲಿ ಒಂದು ಗುರಿ ಇರಲಿ. ಆ ಗುರಿಯನ್ನು ಮುಟ್ಟಲು ಸಮರ್ಥ ಗುರುವನ್ನು ಹೊಂದಬೇಕೆಂದು ತಿಳಿಸಿ, ಶ್ರೀ ವೀರಭದ್ರ ಮಹಾಸ್ವಾಮಿಯ ದುಷ್ಟರ ಸಂಹಾರಕನಾಗಿ ಶ್ರೇಷ್ಟರ ಪರಿಪಾಲಕನಾಗಿದ್ದಾನೆ. ಅಂತಹ ಮಹಿಮಾಶಾಲಿಯ ಕೃಪೆಯಿಂದ ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತವಾಗಲೆಂದು ಆಶಿಸಿದರು.
ಅನುಭವಿಗಳ ಮಾತಿನಂತೆ ಸಂಬಂಧಗಳಿಗೆಂದೂ ಸಹಜ ಸಾವಿಲ್ಲ. ತಿಳುವಳಿಕೆಯ ಕೊರತೆ, ಪ್ರತಿಷ್ಠೆಗಳೇ ಅವುಗಳನ್ನು ಕೊಲ್ಲುತ್ತವೆ. ಆದ್ದರಿಂದ ಗುರುಹಿರಿಯರ ಮಾತಾಪಿತೃಗಳ ಮಾರ್ಗದರ್ಶನದಲ್ಲಿ ಜೀವನವನ್ನು ಸಾಗಿಸುವುದ ಜೊತೆಗೆ ಶ್ರೀ ಗಜದ್ಗುರು ರೇಣುಕಾ ಭಗವತ್ಪಾದರ ದಶಧರ್ಮ ಸೂತ್ರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಪಾವನವಾದ ಮಾನವ ಜನ್ಮದ ಶ್ರೇಷ್ಠತೆಯನ್ನು ಹೆಚ್ಚಿಸಿಕೊಳ್ಳಬೇಕೆಂದರು.

ಧರ್ಮ ಸಮಾರಂಭದ ಅಧ್ಯಕ್ಷತೆಯನ್ನು ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಪುಟ್ಟಸ್ವಾಮಿಗೌಡ ಕಗ್ಗಲಿ ವಹಿಸಿದ್ದರು. ಸಭೆಯಲ್ಲಿ ಎಂ.ಬಿ.ಗಣೇಶ ಗೌಡ, ಕೋಣೆಹೊಸೂರು ಕುಮಾರಗೌಡ, ಮಸರೂರು ಎಂ.ಆರ್.ಮುರುಗೇಶಪ್ಪಗೌಡ ಉಪಸ್ಥಿತರಿದ್ದರು.

ಸುಧಾಕರ ಬೆನವಳ್ಳಿ ಸ್ವಾಗತಿಸಿದರು. ಕಗ್ಗಲಿ ಪ್ರಕಾಶ ಕಾರ್ಯಕ್ರಮ ನಿರೂಪಿಸಿದರು. ಕೆಂಚನಾಲ ಗಣೇಶ್ ವಂದಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago