Categories: Hosanagara News

ದೇಶದ ಉತ್ತಮ ಪ್ರಜೆಯಾಗಿ ಬದುಕಿದರೆ ಅದೇ ಒಬ್ಬ ಶಿಕ್ಷಕನಿಗೆ ವಿದ್ಯಾರ್ಥಿಗಳು ನೀಡುವ ಕೊಡುಗೆ


ಹೊಸನಗರ: ಶಿಕ್ಷಕರು ಮೊದಲು ವೃತ್ತಿಗೆ ಬರುವಾಗ ಕೆಲಸ ಸಿಕ್ಕಿದರೇ ಸಾಕು ಎಂಬ ಹಂಬಲದೊಂದಿಗೆ ನಮ್ಮ ಸಂಸಾರ ನಡೆಸಲು ದಾರಿ ದೀಪವಾಗಿದೆ ಎಂಬ ವಿಶ್ವಾಸದಿಂದ ಶಿಕ್ಷಕರ ವೃತ್ತಿಗೆ ಆಗಮಿಸುತ್ತಾರೆ. ಆದರೆ ವೃತ್ತಿಗೆ ಬಂದ ಮೇಲೆ ನಮ್ಮ ಜವಾಬ್ದಾರಿ ತುಂಬವಿದೆ ಎಂಬ ಆರಿವಾಗುತ್ತದೆ ಎಂದು ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಕುಬೇರಪ್ಪನವರು ಹೇಳಿದರು.


ಹೊಸನಗರ ತಾಲ್ಲೂಕು ಗವಟೂರು ಹಿರಿಯ ಮುಖ್ಯ ಶಿಕ್ಷಕ ನಾರಾಯಣಪ್ಪರವರು ವಯೋನಿವೃತ್ತಿ ಪಡೆದಿದ್ದು ಅವರನ್ನು ಬಡ್ತಿ ಶಿಕ್ಷಕರ ಸಂಘದವತಿ ಇಂದ ಶಾಲೆಯ ಆವರಣದಲ್ಲಿ ಸನ್ಮಾನಿಸಿ ಮಾತನಾಡಿ, ಬರೀ ನಮ್ಮ ಜೀವನ ನಮ್ಮ ಸಂಸಾರ ಮಾತ್ರ ಚೆನ್ನಾಗಿದ್ದರೇ ಸಾಲದು ನಮ್ಮಿಂದ ವಿದ್ಯೆ ಕಲಿಯುವ ವಿದ್ಯಾರ್ಥಿಗಳಿಗೆ ಹಾಗೂ ನಾವು ಶಿಕ್ಷಕರಾಗಿ ಸೇವೆ ಸಲ್ಲಿಸುವ ಶಾಲೆಗೆ ಒಳ್ಳೆಯದಾಗಬೇಕು ಎಂಬ ಭಾವನೆಯೊಂದಿಗೆ ಸೇವೆ ಸಲ್ಲಿಸಬೇಕು‌. ನಾವು ಕಲಿಸುವ ವಿದ್ಯಾರ್ಥಿಗಳು ಈ ದೇಶದ ಒಳ್ಳೆಯ ಪ್ರಜೆಯಾಗಿ ಒಳ್ಳೆಯ ವ್ಯಕ್ತಿಯಾಗಿ ರೂಪಗೊಳಿಸುವ ಹಗಲಿರೂಳು ಚಿಂತಿಸಬೇಕು ಹಾಗೂ ಶಿಕ್ಷಕನಾಗಿ ಸೇವೆ ಸಲ್ಲಿಸಬೇಕು. ವಿದ್ಯಾರ್ಥಿಗಳು ಶಿಸ್ತು ಸಂಯಮವನ್ನು ಶಾಲೆಯಲ್ಲಿ ಕಲಿಯುವುದಕ್ಕೆ ಶಿಕ್ಷಕರೆ ಪ್ರೇರಣೆಯಾಗಬೇಕು, ನಾವು ಕಲಿಸುವ ವಿದ್ಯಾರ್ಥಿಗಳಲ್ಲಿ ಎಲ್ಲರೂ ಬುಧ್ಧಿವಂತರಾಗಬೇಕಾಗಿಲ್ಲ ಅಥವಾ ಸರ್ಕಾರಿ ಹುದ್ದೆ ಪಡೆಯಬೇಕಿಂತಿಲ್ಲ. ಅದರಲ್ಲಿ ಅಲ್ಪ ಪ್ರಮಾಣದ ವಿದ್ಯಾರ್ಥಿಗಳು ಸರ್ಕಾರಿ ಇತರೆ ಕೆಲಸಕ್ಕೆ ಹೋದರೆ ಸಾಕು ಆದರೆ ನಾವು ಕಲಿಸಿರುವ ಪಾಠ ಮುಂದಿನ ಪೀಟಿಗೆಗೆ ಪ್ರೇರಣೆಯಾಗಬೇಕು ಅದರ ಜೊತೆಗೆ ಈ ದೇಶದ ಉತ್ತಮ ಪ್ರಜೆಯಾಗಿ ಬದುಕಿದರೆ ಒಬ್ಬ ಶಿಕ್ಷಕನಿಗೆ ವಿದ್ಯಾರ್ಥಿಗಳು ನೀಡುವ ಕೊಡಿಗೆಯಾಗಿರುತ್ತದೆ. ಆದ್ದರಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುವವರು ಮೊದಲು ನಮ್ಮ ಜೀವನವನ್ನು ಸರಿಯಾದ ಜವಾಬ್ದಾರಿಯಲ್ಲಿ ತೆಗೆದುಕೊಂಡು ಹೋದಾಗ ಮಕ್ಕಳಿಗೆ ನೀತಿ ಪಾಠ ಹೇಳಲು ಸಹಕಾರಿಯಾಗುತ್ತದೆ ಎಂದರು.


ಬಡ್ತಿ ಶಿಕ್ಷಕರ ಸಂಘದ ಮುಖ್ಯ ಶಿಕ್ಷಕ ಸಂಘದ ಶಿಕ್ಷಕರಾದ ದುಗ್ಗಪ್ಪ, ಲಿಲ್ಲಿ ಡಿಸೋಜ, ಶಾರದಮ್ಮ, ಸತೀಶ, ಬಿ. ದೇವೆಂದ್ರಪ್ಪ, ಗಣಪತಿ, ರೇಣುಕಪ್ಪ, ಮಂಜಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ, ಪ್ರಕಾಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago