Categories: Hosanagara News

ಧಣಿದಿರುವ ಆರಗ, ಕಿಮ್ಮನೆಗೆ ವಿಶ್ರಾಂತಿ ಕೊಟ್ಟು ಯುವಕರಿಗೆ ಈ ಬಾರಿ ಆದ್ಯತೆ ನೀಡಿ ; ಮತದಾರರಿಗೆ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಕಿವಿಮಾತು


ಹೊಸನಗರ: ಶರಾವತಿ, ಚಕ್ರಾ, ಸಾವೆಹಕ್ಲು ಮುಳುಗಡೆ ಸಂತ್ರಸ್ತರ ಸಮಸ್ಯೆಗಳು ಕ್ಷೇತ್ರದಲ್ಲಿ ಇಂದಿಗೂ ಜೀವಂತವಾಗಿವೆ. ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ಕಳೆದ ನಾಲ್ಕು ದಶಕಗಳಿಂದ ಆಡಳಿತ ನಡೆಸಿದ ಎಲ್ಲಾ ರಾಷ್ಟೀಯ ಪಕ್ಷಗಳ ಜನಪ್ರತಿನಿಧಿಗಳು ಸೋತಿದ್ದಾರೆ. ಇದಕ್ಕಾಗಿ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ತಮ್ಮ ಮತ ನೀಡುವ ಮೂಲಕ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್(ಜ್ಯಾ) ಸರ್ಕಾರ ಅಧಿಕಾರಿದ ಚುಕ್ಕಾಣಿ ಹಿಡಿಯುವಂತೆ ಆರ್ಶಿವಾದಿಸಬೇಕೆಂದು ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್(ಜ್ಯಾ) ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಮ್ ಮತದಾರರಲ್ಲಿ ಮನವಿ ಮಾಡಿದರು.


ತಾಲೂಕಿನ ಮೇಲಿನಬೆಸಿಗೆ ಗ್ರಾಮದಲ್ಲಿ ಸೋಮವಾರ ಮತದಾರರನ್ನು ಉದ್ದೇಶಿಸಿ ಪ್ರಚಾರ ಭಾಷಣ ಮಾಡಿದ ಅವರು, ಬರೀ ರಸ್ತೆ, ಚರಂಡಿ. ಮೋರಿಗಳ ನಿರ್ಮಾಣದಿಂದ ಕ್ಷೇತ್ರದ ಅಭಿವೃದ್ದಿ ಸಾಧ್ಯವಿಲ್ಲ. ದುಡಿಯುವ ಕೈಗಳಿಗೆ ಕೆಲಸದ ಅವಶ್ಯಕತೆ ಇದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಗಲಿ, ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಲಿ ಕ್ಷೇತ್ರಕ್ಕೆ ಈವರೆಗೂ ಯಾವುದೇ ಕೈಗಾರಿಕೆ, ಕಾರ್ಖಾನೆಗಳನ್ನು ತರುವಲ್ಲಿ ಸಂಪೂರ್ಣ ವಿಫಲ ಆಗಿದ್ದಾರೆ. ಇದರಿಂದ ಯುವಸಮೂಹ ಮಹಾನಗರಗಳತ್ತ ಮುಖಮಾಡ ತೊಡಗಿದ್ದಾರೆ. ಯುವ ಸಮೂಹಗಳ ಸ್ಥಳೀಯ ಕೊಂಡಿ ಕಳಚದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ನಾಗರೀಕನ ಮೇಲಿದೆ. ಅಲ್ಲದೆ, ಸ್ಥಳೀಯವಾಗಿ ಉದ್ಯೋಗ ಸೃಷ್ಠಿಯ ಆಗತ್ಯತೆಯೂ ಇದೆ. ಆದರೆ, ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಹಾಲಿ ಹಾಗೂ ಮಾಜಿ ಶಾಸಕರು ಇದು ನಮ್ಮ ಕೊನೆಯ ಚುನಾವಣೆ. ದಯಮಾಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಗೀಳಿಡುತ್ತಿರುವುದು ಸೋಜಿಗದ ಸಂಗತಿಯಾಗಿದೆ ಎಂದು ಆರೋಪಿಸಿದರು.


ತಾವೊಬ್ಬ ಯುವಕರಾಗಿದ್ದು ತಾವು ಕ್ಷೇತ್ರದ ಜನತೆಗೆ ನೀಡುವ ವಾಗ್ದಾನದಲ್ಲಿ ಯಾವುದೊಂದನ್ನು ಅಭಿವೃದ್ದಿ ಮಾಡದೇ ಇದ್ದಲ್ಲಿ ಅಂದೇ ನನ್ನ ಕೊನೆ ಚುನಾವಣೆ ಎಂದು ಮತದಾರ ಹೇಳಲಿ. ಅಂದೇ ತಾವು ರಾಜಕೀಯ ಸನ್ಯಾಸ ಸ್ವೀಕರಿಸುವ ಸವಾಲ್ ಹಾಕಿದರು.


ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷ ವರ್ತೇಶ್, ಪ್ರಧಾನ ಕಾರ್ಯದರ್ಶಿ ತ್ರಿಣಿವೆ ಜಯರಾಮ ಶೆಟ್ಟಿ, ಪ್ರಮುಖರಾದ ಮೂಡಬಾಗಿಲು ರಮಾನಂದ್, ನಾಗರಕೊಡಿಗೆ ದಿಲೀಪ್, ಈರಣ್ಣ, ತೀರ್ಥಹಳ್ಳಿ ತಾಲೂಕಿನ ಪಕ್ಷದ ಪ್ರಮುಖರಾದ ರಾಘವೇಂದ್ರ, ಮಹೇಂದ್ರಗೌಡ, ಮಹಿಳಾಧ್ಯಕ್ಷೆ ಸೌಮ್ಯ ಸೇರಿದಂತೆ ಹಲವು ಉಪಸ್ಥಿತರಿದ್ದರು.

‘ಬಗರ್ ಹುಕುಂ, ಶರಾವತಿ. ಚಕ್ರ, ಸಾವೆಹಕ್ಲು ಸಮಸ್ಯೆಗಳು ಇಂದಿಗೂ ಜೀವಾಂತವಾಗಿದೆ. ಇದಕ್ಕೆ ಹಾಲಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಾರಣ. ಸಮಸ್ಯೆಗಳನ್ನು ಜೀವಂತವಾಗಿರಿಸಿ ಕ್ಷೇತ್ರದಲ್ಲಿ ಇಬ್ಬರೂ ರಾಜಕಾರಣ ಮಾಡುತ್ತಿರುವುದು ಮತದಾರರ ದುರಂತವೇ ಸರಿ. ಇವರಿಗೆ ಚುನಾವಣೆ ಮುಖ್ಯವೋ. ಜನರ ಸಮಸ್ಯೆಗಳ ನಿವಾರಣೆ ಮುಖ್ಯವೋ. ಈ ಬಾರಿ ಪ್ರಜ್ಞಾವಂತ ಮತದಾರರೇ ತಕ್ಕ ಉತ್ತರ ನೀಡಬೇಕಿದೆ.
ಸುಮಾರು 40 ವರ್ಷಗಳ ಕಾಲ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸುತ್ತ ಬಂದಿರುವ ಈ ಇಬ್ಬರನ್ನು ಜನತೆ ಈ ಬಾರಿ ವಿಶ್ರಾಂತ ಜೀವನಕ್ಕೆ ಕಳುಹಿಸಲಿ. ಮತದಾರ ಯುವಕರಿಗೆ ಆದ್ಯತೆ ನೀಡಲಿ. ತಾವು ಭಾರೀ ಪ್ರಾಮಾಣಿಕರೆಂದು ಜನತೆಯ ಮುಂದೆ ಬಡಾಯಿ ಕೊಚ್ಚಿಕೊಳ್ಳುವ ಕಿಮ್ಮನೆ ಹಾಗೂ ಆರಗ ಅವರಂತೆ ತಮಗೆ ಯಾವುದೇ ಭಷ್ಠಾಚಾರ ಹಣದ ಮೂಲಗಳಿಲ್ಲ. ತಾವೊಬ್ಬ ರೈತನ ಮಗ. ಕ್ಷೇತ್ರದಲ್ಲಿ ಸುಮಾರು 10,500 ಕ್ಕೂ ಹೆಚ್ಚು ರೈತರು ಜೆಡಿಎಸ್ ಸರ್ಕಾರ ಆಡಳಿತ ಅವಧಿಯ ಸಾಲಮನ್ನದ ಫಲಾನುಭವಿಗಳೇ ಪಕ್ಷಕ್ಕೆ ಶ್ರೀ ರಕ್ಷೆ ಆಗಿದ್ದಾರೆ.’
– ಯಡೂರು ರಾಜಾರಾಂ,
ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್(ಜ್ಯಾ) ಅಭ್ಯರ್ಥಿ

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

34 mins ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

6 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

15 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago