ರಿಪ್ಪನ್ಪೇಟೆ : ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು.
ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ, ಶೈಕ್ಷಣಿಕ, ವೈಜ್ಞಾನಿಕ, ಔದ್ಯೋಗಿಕ ಕ್ಷೇತ್ರ ನವಮನ್ವಂತರದಲ್ಲಿ ಉದ್ದೀಪನಗೊಳ್ಳಲಿ ಎಂದು ಆಶಿಸಿದರು.
ಗಣತಂತ್ರವು ಭಾರತೀಯ ಸನಾತನ ಧರ್ಮ ಜೈನರ ಕೊಡುಗೆ. 24ನೇ ತೀರ್ಥಂಕರ ಶ್ರೀ ಮಹಾವೀರ ಸ್ವಾಮಿಯವರು ದೇಶದೆಲ್ಲೆಡೆ ಗಣತಂತ್ರದ ಮೂಲ ಪುರುಷರೆಂದು ದಾಖಲಾಗಿದ್ದು, ಗ್ರಾಮ ಸ್ವರಾಜ್ಯ, ಆಡಳಿತ ವಿಕೇಂದ್ರಿಕರಣದ ಫಲವು ಅಸಮಾನತೆ, ಸಂಘರ್ಷ ನಿವಾರಿಸುತ್ತದೆ ಎಂಬ ಉಲ್ಲೇಖವನ್ನು ಶ್ರೀಗಳವರು ವಿವರಿಸಿದರು.
ಹುಂಚ ಪರಂಜ್ಯೋತಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಧ್ವಜಾರೋಹಣ, ವಿದ್ಯಾರ್ಥಿಗಳ ಸಾಮೂಹಗಾನ ಜರುಗಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾವತಿ, ಶಿಕ್ಷಕಿಯರು ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…