Categories: Hosanagara News

ನನ್ನ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಕಾರಣ ; ಹರತಾಳು ಹಾಲಪ್ಪ


ಹೊಸನಗರ: ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಕಾರಣವಾಗಿದೆಯೇ ಹೊರತು ಕಾರ್ಯಕರ್ತರ ನನ್ನ ಪಾತ್ರವೇನು ಇಲ್ಲ ಎಂದು ಹರತಾಳು ಹಾಲಪ್ಪನವರು ಹೇಳಿದರು.


ಹೊಸನಗರದ ಬಿಜೆಪಿ ಕಛೇರಿಯಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಕಾರ್ಡ್ ಎಷ್ಟು ಯಶಸ್ವಿಯಾಗಲಿದೆ ಎಂದು ಕಾದು ನೋಡುವ ಸಂದರ್ಭ ಬಂದಿದೆ. ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಜನರ ಸೇವೆ ಮಾಡುವುದನ್ನು ಬಿಟ್ಟು ಸೋಲಿನಿಂದ ಹತಾಶರಾಗಿ ಕುಳಿತುಕೊಳ್ಳುವುದು ಬೇಡ. ಸೋತಿದ್ದೇನೆ ಎಂದು ಊರು ಬಿಡುವ ಮಗ ನಾನಲ್ಲ. ಸೋಲು ಗೆಲುವು ಒಂದು ನಾಣ್ಯದ ಎರಡು ಮುಖಗಳಿದಂತೆ ಸ್ಪರ್ಧೆಯಲ್ಲಿ ಒಬ್ಬರು ಸೋಲಲೇ ಬೇಕು ಇನ್ನೊಬ್ಬರು ಗೆಲ್ಲಲೇ ಬೇಕು ಅದಕ್ಕಾಗಿ ದುಃಖಿಸುತ್ತ ಕುಳಿತರೆ ಹತಾಶೆ ಮನೋಭಾವಗೊಂಡರೆ ಕಾರ್ಯಕರ್ತರಿಗೆ ಧೈರ್ಯ ತುಂಬುವುವರ‍್ಯಾರು? ಅದಕ್ಕಾಗಿ ಚುನಾವಣೆ ಹಬ್ಬ ಮುಗಿದಿದೆ ಇನ್ನೊಂದು ಚುನಾವಣೆಯ ಹಬ್ಬಕ್ಕೆ ಸಜ್ಜಗಬೇಕಾಗಿದೆ.

ಬಿಜೆಪಿ ಕಾರ್ಯಕರ್ತರು ಸಂಘಟನೆಯಲ್ಲಿ ಹೆಸರು ಮಾಡಿರುವವರು ಎಲ್ಲರೂ ಒಗ್ಗಟಿನಿಂದ ಬಂದ ಕಷ್ಟಗಳನ್ನು ಎದುರಿಸೋಣ ಎಂದು ಗೆದ್ದವರು ನಿಮ್ಮನ್ನೂ ಪ್ರಚೋಧಿಸುವ ಸಾಧ್ಯತೆ ಇಲ್ಲದಿಲ್ಲ ಅದಕ್ಕೆ ಬಿಜೆಪಿಯ ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗಬಾರದು ಸೋತವರು ಯಾವತ್ತು ಅನಾಥರಾಗಿ ಬಿಡುತ್ತಾರೆ ಗೆದ್ದವರ ಹಿಂದೆ ಹಿಂದೆ ಸಾವಿರಾರು ಜನ ನಿಲ್ಲುತ್ತಾರೆ ಸೋತಿದ್ದೇವೆ ಎಂದ ಮಾತ್ರಕ್ಕೆ ನಮ್ಮ ಸಂಕಲ್ಪದಿಂದ ಹಿಂದೆ ಸರಿಯಬಾರದು ಜನರ ತೀರ್ಪನ್ನು ಗೌರವಿಸೋಣ ಕಾರ್ಯಕರ್ತರ ರಕ್ಷಣೆಯ ವಿಷಯಕ್ಕೆ ಬಂದರೆ ನಾನೇ ಖುದ್ದಾಗಿ ನಿಮ್ಮ ಜೊತೆ ನಿಲ್ಲುತ್ತೇನೆ.

ಕಳೆದ ಹತ್ತು ವರ್ಷಗಳಲ್ಲಿ ಕ್ಷೇತ್ರದಲ್ಲಿ ಯಾವುದೇ ಗಲಾಟೆಗಳು ನಡೆದಿಲ್ಲ ಮುಂದೆಯು ಸಹ ಅಂಥಹ ಗಲಾಟೆಗಳು ಆಗಬಾರದು ನೀವು ಸಹನೇ ಇಂದ ಇದ್ದು ಸರ್ಕಾರದ ಭರವಸೆಗಳನ್ನು ಈಡೇರಿಸುತ್ತಿದ್ದಾರಾ ಎಂಬುದನ್ನು ಮನವರಿಕೆ ಮಾಡಿಕೊಳ್ಳುವುದರ ಜೊತೆಗೆ ಸರ್ಕಾರ ನೀಡುತ್ತಿರುವ ಸವಲತ್ತು ನಮ್ಮ ಕ್ಷೇತ್ರದ ಮನೆಗಳಿಗೆ ತಲುಪಿಸುತ್ತಿದ್ದಾರ, ಇಲ್ಲವಾ ಎಂಬುದನ್ನು ಮನವರಿಕೆ ಮಾಡಿಕೊಳ್ಳುತ್ತಿರಬೇಕು. ಏನೇ ಆದರೂ ನಮ್ಮ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆನ್ನಿಗೆ ನಾನಿದ್ದು ನಮ್ಮ ಕಾರ್ಯಕರ್ತರಿಗೆ ತೊಂದರೆಯಾದರೆ ಸುಮ್ಮನಿರುವುದಿಲ್ಲ ಎಂದರು.

ಕಣ್ಣೀರು ಹಾಕಿದ ಮಹಿಳೆಯರು

ಸಾಗರ- ಹೊಸನಗರದ ಬಿಜೆಪಿಯ ಅಭ್ಯರ್ಥಿ ಹರತಾಳು ಹಾಲಪ್ಪನವರು ಸೋತಿರುವುದರಿಂದ ಮತದಾರರಿಗೆ ಅಭಿನಂದನ ಸಭೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಣ್ಣೀರು ಹಾಕುತ್ತಿರುವ ದೃಶ್ಯ ಕಂಡು ಬಂದಿದ್ದು ಇವರಿಗೆ ಹರತಾಳು ಹಾಲಪ್ಪನವರು ಸಮಧಾನ ಪಡಿಸಿದ ಪ್ರಸಂಗವೂ ನಡೆಯಿತು.


ಈ ಅಭಿನಂದನಾ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಟೌನ್ ಘಟಕದ ಅಧ್ಯಕ್ಷ ಕೋಣೆಮನೆ ಶಿವಕುಮಾರ್, ಎನ್ ಶ್ರೀಧರ ಉಡುಪ, ವೀರೇಶ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಬಿಜೆಪಿ ಹಿರಿಯರಾದ ಎನ್.ಆರ್. ದೇವಾನಂದ್, ಉಮೇಶ್ ಕಂಚುಗಾರ್, ಪಟ್ಟಣ ಪಂಚಾಯತಿ ಸದಸ್ಯರಾದ ಗಾಯಿತ್ರಿ ನಾಗರಾಜ್, ಎಂ.ಎನ್. ಸುಧಾಕರ್, ಶ್ರೀಪತಿರಾವ್, ಗುರುರಾಜ್, ಗುಲಾಬಿ ಮುರಿಯಪ್ಪ, ಕೃಷ್ಣವೇಣಿ, ಯಾಸೀರ್, ಮಂಡಾನಿ ಮೋಹನ್, ರಾಜೇಶ್ ಕೀಳಂಬಿ ಶಿವಾನಂದ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

3 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

5 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

5 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

8 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

20 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

21 hours ago