Categories: Hosanagara News

ನಿಮ್ಮ ಪ್ರೀತಿ ಮತವಾಗಿ ಪರಿವರ್ತನೆ ಆಗಿ ಬೇಳೂರನ್ನು ಜಯಶಾಲಿ ಮಾಡಲಿ : ಶಿವಣ್ಣ

ಹೊಸನಗರ : ಬೇಳೂರು ಗೋಪಾಲಕೃಷ್ಣ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಗರಡಿಯಲ್ಲಿ ಪಳಗಿದವರು. ಮಾತ್ರವಲ್ಲ ಅವರ ಪ್ರೀತಿಯ ಮಾನಸ ಪುತ್ರರಾಗಿದ್ದರು ಎಂದು ಸೊರಬ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಹೊಸನಗರದಲ್ಲಿ ಸೋಮವಾರ ಚುನಾವಣೆ ಸಭೆಯಲ್ಲಿ ಮಾತನಾಡಿ, ‘ಬಂಗಾರಪ್ಪಜೀ ಕೊನೆಯ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿ ಬೇಳೂರಿಗೆ ನೀಡುವ ಮತ ಬಂಗಾರಪ್ಪ ಅವರಿಗೆ ಸಲ್ಲುತ್ತದೆ’ ಎಂದು ಹೇಳಿದರು.

ಮತ ಪ್ರಚಾರ ಹಾಗೂ ರೋಡ್‌ ಶೋನಲ್ಲಿ ಭಾಗವಹಿಸಿದ್ದ ಚಲನಚಿತ್ರ ನಟ ಶಿವರಾಜ್‌ಕುಮಾರ್ ಮಾತನಾಡಿ, ‘ಸುಡುವ ಬಿಸಿಲಿನಲ್ಲೂ ನನಗಾಗಿ ಕಾದಿದ್ದೀರಿ. ಪ್ರೀತಿ ಅಭಿಮಾನ ತೋರಿದ್ದೀರಿ. ಅದಕ್ಕೆ ಚಿರಋಣಿ. ನಿಮ್ಮ ಪ್ರೀತಿ ಮತವಾಗಿ ಪರಿವರ್ತನೆ ಆಗಿ ಬೇಳೂರು ಗೋಪಾಲಕೃಷ್ಣರನ್ನು ಜಯಶಾಲಿ ಮಾಡಲಿ’ ಎಂದು ಹೇಳಿದರು.

ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಮಾತನಾಡಿ, ‘ಹೊಸನಗರದಲ್ಲಿ ಅಭಿವೃದ್ಧಿ ನಡೆದಿದ್ದರೆ ಅದು ನನ್ನ ಕಾಲದಲ್ಲಿ. ಬಸ್ ನಿಲ್ದಾಣ ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ನಾನು ಶಾಸಕನಾಗಿದ್ದಾಗ ನಿರ್ಮಾಣವಾಗಿವೆ. ಆದರೆ, ಈಗ ನಾನು ಮಾಡಿದ್ದು ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಪ್ರಮುಖರಾದ ಹಕ್ರೆ ಮಲ್ಲಿಕಾರ್ಜುನ್, ಕಲಗೋಡು ರತ್ನಾಕರ್, ಬಿ.ಜಿ.ನಾಗರಾಜ್, ಹಾಲಗದ್ದೆ ಉಮೇಶ್ ಪ್ರಭಾಕರರಾವ್, ಮಹಾಬಲರಾವ್, ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್ ಸೇರಿ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಇದ್ದರು.

ಮಧು ಬೇರೆಯಲ್ಲ, ಬೇಳೂರು ಬೇರೆಯಲ್ಲ : ಗೀತಾ ಶಿವರಾಜ್‌ಕುಮಾರ್‌

‘ನನಗೆ ತಮ್ಮ ಮಧು ಬೇರೆಯಲ್ಲ, ನಮ್ಮ ಅಪ್ಪಾಜಿ ಪ್ರೀತಿಗೆ ಪಾತ್ರರಾಗಿದ್ದ ಬೇಳೂರು ಬೇರೆಯಲ್ಲ. ಬೇಳೂರು ಗೋಪಾಲಕೃಷ್ಣ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ’ ಎಂದು ಗೀತಾ ಶಿವರಾಜ್‌ಕುಮಾರ್ ಮನವಿ ಮಾಡಿದರು.

ರೋಡ್‌ ಶೋನಲ್ಲಿ ಮಿಂಚಿದ ಶಿವರಾಜ್‌ಕುಮಾರ್‌

ಭರ್ಜರಿ ರೋಡ್ ಶೋ ಮಾವಿನಕೊಪ್ಪದಿಂದ ಹೊಸನಗರದ ಪ್ರಮುಖ ಮಾರ್ಗದಲ್ಲಿ ರೋಡ್ ಶೋ ನಡೆಸಲಾಯಿತು. ಈ ವೇಳೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿಂದ ಬೈಕ್ ರ‍್ಯಾಲಿ ನಡೆಯಿತು. ಬಳಿಕ ಬಸ್ ನಿಲ್ದಾಣದ ಆವರಣದಲ್ಲಿ ಸಭೆ ನಡೆಯಿತು. ಚಲನಚಿತ್ರ ನಟ ಶಿವರಾಜ್‌ಕುಮಾರ್ ಪರ ಘೋಷಣೆ ಮುಗಿಲು ಮುಟ್ಟಿತ್ತು. ಅಭಿಮಾನಿಗಳ ಒತ್ತಾಸೆ ಮೇರೆಗೆ ಶಿವಣ್ಣ ‘ಆಡಿಸಿ ನೋಡು.. ಬೀಳಿಸಿ ನೋಡು… ಉರುಳಿ ಹೋಗದು’ ಹಾಡು ಹೇಳಿ ಮತದಾರರನ್ನು ರಂಜಿಸಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

13 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

15 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

16 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

21 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

22 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago