ರಿಪ್ಪನ್ಪೇಟೆ: ಇಲ್ಲಿನ ಗ್ರಾಮ ಪಂಚಾಯ್ತಿ ಹಿಂಭಾಗದ ವಿ.ಎಸ್.ಎಸ್.ಎನ್.ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಸಾಕಷ್ಟು ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಿ ಜಿಲ್ಲಾ ಆಹಾರ ಉಪನಿರ್ದೇಶಕ
ಅವಿನ್ ಆರ್. ಆದೇಶಿಸಿದ್ದಾರೆ.
ಇದೇ ಡಿಸೆಂಬರ್ 16 ರಂದು ಜಿಲ್ಲಾ ಆಹಾರ ಉಪನಿರ್ದೇಶಕ ಅವಿನ್ ಆರ್.ಇಲ್ಲಿನ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ನ್ಯಾಯಬೆಲೆ ಅಂಗಡಿಯ ದಾಸ್ತಾನಿನ ಪರಿಶೀಲನೆ ನಡೆಸಲಾಗಿ ಭೌತಿಕ ದಾಸ್ತಾನಿಗೂ ಆನ್ಲೈನ್ ದಾಸ್ತಾನಿಗೂ ಸಾಕಷ್ಟು ವ್ಯತ್ಯಾಸವಿರುವುದು ಕಂಡುಬಂದಿರುತ್ತದೆ. ದರ ದಾಸ್ತಾನು ನಾಮಫಲಕದಲ್ಲಿ ದಾಸ್ತಾನು ವಿವರ ನಮೂದಿಸಿರುವುದಿಲ್ಲ. ನ್ಯಾಯಬೆಲೆ ಅಂಗಡಿಯಲ್ಲಿ ಜಾಗೃತಿ ಸಮಿತಿ ಸದಸ್ಯರ ಪಟ್ಟಿ
ಪ್ರದರ್ಶಿಸಿರುವುದಿಲ್ಲ. ನ್ಯಾಯಬೆಲೆ ಅಂಗಡಿಯಲ್ಲಿ ತನಿಖಾ ಪುಸ್ತಕ ಇಲ್ಲದೇ ಇರುವಂತಹ ನ್ಯೂನತೆಗಳು ಕಂಡುಬಂದಿರುತ್ತವೆ.
ವಿತರಣಾ ಪದ್ದತಿ (ನಿಯಂತ್ರಣಾ) ಅದೇಶ-2016ಕ್ಲಾಸ್ 4(3) ರಡಿ ಪಡೆದ ಪ್ರಾಧಿಕಾರ ಸಾಮಾನ್ಯ ಷರತ್ತು ಸಂಖ್ಯೆ 5.7.8.ಮತ್ತು 9 ಹಾಗೂ ಕ್ಲಾಸ್ 14.16 ಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬಂದಿರುವುದರಿಂದ ನಿಯಮಾನುಸಾರ ಸದರಿ ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ಅಮಾನತುಪಡಿಸಿದ್ದಾರೆ.
ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅಮಾನತಾಗಿರುವ ಹಿನ್ನಲೆಯಲ್ಲಿ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಸಮೀಪದ ನ್ಯಾಯಬೆಲೆ ಅಂಗಡಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿ ವರದಿ ಸಲ್ಲಿಸಲು ಹೊಸನಗರ ತಹಶೀಲ್ದಾರ್ ಇವರಿಗೆ ಸೂಚಿಸಿದೆ.
ಕಳೆದ 2019-20 ಸಾಲಿನಲ್ಲಿ ಸಹ ದೇಶವ್ಯಾಪ್ತಿ ಕೊರೊನಾ ಮಹಾಮಾರಿ ಇದ್ದಾಗ ಸಹ ಇಲ್ಲಿನ ವಿ.ಎಸ್.ಎಸ್.ಎನ್. ನ್ಯಾಯಬೆಲೆ ಅಂಗಡಿಯ ಪಡಿತರ ದಾಸ್ತಾನು ಸಾಕಷ್ಟು ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ನ್ಯಾಯಬೆಲೆ ಅಂಗಡಿಯ ಪರವಾನಿಗೆ ಅಮಾನತು ಮಾಡಲಾಗಿದ್ದನ್ನು ಸ್ಮರಿಸಬಹುದಾಗಿದೆ. ಈ ರೀತಿಯಲ್ಲಿ ನ್ಯಾಯಬೆಲೆ ಅಂಗಡಿ ಎರಡನೇ ಬಾರಿಯಲ್ಲಿ ಅಮಾನತಾಗುತ್ತಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…