ಹೊಸನಗರ: ಪರಿಸರ ನಾಶವಾದರೆ ಇಡೀ ವಿಶ್ವವೇ ನಾಶವಾದಂತೆ ಪ್ರತಿಯೊಬ್ಬ ಮನುಜರು ಮನೆಗೊಂದು ಮಕ್ಕಳು ಹೇಗೋ ಮನೆಗೊಂದು ಮರವನ್ನು ಬೆಳಸಬೇಕು ಗಿಡಗಳನ್ನು ನೆಟ್ಟು ಮರವಾಗಿ ಬೆಳೆಸುವ ಕಾಯಕ ಬೆಳೆಸಿಕೊಳ್ಳಬೇಕೆಂದು ಹೊಸನಗರದ ತಹಶೀಲ್ದಾರ್ ಡಿ.ಜಿ ಕೋರೆಯವರು ಹೇಳಿದರು.
ಪಟ್ಟಣದ ನೆಹರು ಮೈದಾನದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ವಿವಿಧ ಭಾಗಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಗಿಡಗಳನ್ನು ನೆಟ್ಟು ಮಾತನಾಡಿದರು.
ಗಿಡಗಳನ್ನು ಬೆಳೆಸುವುದರಿಂದ ಪರಿಸರದ ವಾತಾವರಣ ಸುಚಿಯಾಗಿರುವುದರ ಜೊತೆಗೆ ನಮಗೆ ತಂಪಾದ ಗಾಳಿ, ಮನುಷ್ಯರಿಗೆ ಪ್ರಾಣಿ ಪಕ್ಷಿಗಳಿಗೆ ತಿನ್ನುವ ಆಹಾರವನ್ನು ನೀಡುತ್ತದೆ ಗಿಡ ಮರಗಳನ್ನು ಬೆಳೆಸುವುದರಿಂದ ಕಾಲ-ಕಾಲಕ್ಕೆ ಮಳೆ ಬೆಳೆಗಳು ಬೆಳೆಯುವುದರಿಂದ ದೇಶ ಸಮೃದ್ಧಿಯಾಗಿರುತ್ತದೆ ಎಂದರು.
ಈ ಪರಿಸರ ದಿನಾಚಣೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಟಿ, ಆರೋಗ್ಯಾಧಿಕಾರಿ ಪ್ರಶಾಂತ್, ಗ್ರಾಮ ಆಡಳಿತಾಧಿಕಾರಿ ಕೌಶಿಕ್, ಉಮಾಶಂಕರ್, ಮಂಜುನಾಥ್, ಪರಶುರಾಮ, ಗಿರೀಶ್, ಪಟ್ಟಣ ಪಂಚಾಯತಿ ಸದಸ್ಯರಾದ ಹಾಲಗದ್ದೆ ಉಮೇಶ್, ಅಶ್ವಿನಿಕುಮಾರ್, ಕೃಷ್ಣವೇಣಿ, ಶಾಹಿನ, ಗಾಯಿತ್ರಿ ನಾಗರಾಜ್, ಆಸ್ಮಾ, ನೇತ್ರಾ, ಕುಮಾರಿ, ಚಂದ್ರಪ್ಪ ಹಾಗೂ ಪೌರ ಕಾರ್ಮಿಕರು ಪಟ್ಟಣ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…