Categories: Hosanagara News

ಪರಿಸರ ವಿನಾಶಕ್ಕೆ ಮಾನವನ ಅತಿಯಾಸೆ ಕಾರಣ ; ನ್ಯಾಯಾಧೀಶ ಕೆ ರವಿಕುಮಾರ್ ಅಭಿಮತ

ಹೊಸನಗರ : ಮನುಷ್ಯರ ಅವಿವೇಕತನ ಅತಿಯಾಸೆಯಿಂದ ಪರಿಸರ ನಾಶವಾಗುತ್ತಿರುವುದಕ್ಕೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ವ್ಯವಹಾರ ನ್ಯಾಯಾಧೀಶ ಕೆ ರವಿಕುಮಾರ್ ತಮ್ಮ ಅಭಿಮತ ವ್ಯಕ್ತಪಡಿಸಿದರು.

ಹೊಸನಗರದ ನ್ಯಾಯಾಲಯದ ಆವರಣದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವದ ಅಂಗವಾಗಿ ಹೊಸನಗರ ಅರಣ್ಯ ಇಲಾಖೆ ಮತ್ತು ನ್ಯಾಯಾಲಯದ ಸಹಭಾಗಿತ್ವದಲ್ಲಿ ಗಿಡಗಳನ್ನು ನೆಟ್ಟು ಮಾತನಾಡಿ, ಪ್ರತಿಯೊಬ್ಬರು ವರ್ಷಕ್ಕೊಂದರಂತೆ ಗಿಡ ನೆಡುವ ಹವ್ಯಾಸ ಬೆಳೆಸಿದರೆ ಅಪರಿಮಿತ ವೃಕ್ಷ ಸಂಪತ್ತನ್ನು ನಾವು ಪಡೆಯಬಹುದಾಗಿದೆ ಎಂದರು.

ಪರಿಸರ ನಾಶ ವಿನಾಶಕ್ಕೆ ಕಾರಣವಾಗಲಿದ್ದು ಅದರ ಪರಿಣಾಮ ಮುಂದಿನ ಪೀಳಿಗೆಗೆ ಅವರ ಭವಿಷ್ಯತೆಗೆ ಗಂಭೀರ ಪರಿಣಾಮ ಆಗಲಿದ್ದು ಅದನ್ನು ತಪ್ಪಿಸಲು ಪ್ರತಿಯೊಬ್ಬರು ವೃಕ್ಷ ಸಂಪತ್ತನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.

ಒಬ್ಬ ಮನುಷ್ಯ ವರ್ಷಕ್ಕೆ ಒಂದು ಗಿಡದಂತೆ ನೆಟ್ಟು ಆರೈಕೆ ಮಾಡಿದರೃ ಅವರ ಸಾಮಾನ್ಯ ಜೀವಿತವಾಧಿ 60 ವರ್ಷಗಳೆಂದು ತಿಳಿದುಕೊಂಡರೂ 60 ಗಿಡಗಳನ್ನು ನೆಡಬಹುದು ಆದರೆ ನಾನು ನೆಟ್ಟ ಗಿಡವನ್ನು ಮರವಾಗಿ ಮಾಡುವ ಹೊಣೆಗಾರಿಕೆ ಹೊಂದಿರಬೇಕು ಎಂದರು.


ಇಂದು ವಿಶ್ವ ಪರಿಸರ ದಿನ, ಪರಿಸರದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನವನ್ನಾಗಿ ಆಚರಿಸುತ್ತಾ ಬಂದಿದ್ದೇವೆ ಪ್ರತಿ ವರ್ಷ ವಿಬಿನ್ನ ಧ್ಯೇಯದೊಂದಿಗೆ ಆಚರಿಸಲಾಗುತ್ತಿದ್ದು ಈ ಬಾರಿಯ ವಿಶೇಷ ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿ ನಾವು ಮಾಡಬೇಕಾಗಿದೆ. ಇಂದು ಪ್ಲಾಸ್ಟಿಕ್ ಬಳಕೆ ಮೀರಿದೆ ಪ್ಲಾಸ್ಟಿಕ್ ಬಳಕೆ ಇಲ್ಲದ ದಿನವನ್ನು ಊಹಿಸಲು ಸಾಧ್ಯವಿಲ್ಲ. ಆಹಾರದಿಂದ ಹಿಡಿದು ಬಟ್ಟೆಯ ಪ್ಯಾಕ್‌ವರೆಗೆ ಪ್ಲಾಸ್ಟಿಕ್ ಎಲ್ಲಡೆ ವ್ಯಾಪಿಸಿದೆ ಸುಲಭವಾಗಿ ಕರಗದ ಇದು ಜೀವ ವೈವಿಧ್ಯಕ್ಕೆ ಮಾರಕವಾಗಿದೆ ಇದನ್ನು ನಮ್ಮ ಭಾರತ ದೇಶದಿಂದ ಕಿತ್ತೊಗೆಯಬೇಕಾಗಿದೆ ನಾವು ನಿವೇಲ್ಲರೂ ಸೇರಿ ಪರಿಸರ ಉಳಿಸುವುದರ ಜೊತೆಗೆ ಪ್ಲಾಸ್ಟಿಕ್ ಮುಕ್ತ ಭಾರತ ದೇಶವನ್ನಾಗಿ ಮಾಡೋಣ ಎಂದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್ ಪ್ರಕಾಶ್ ಮಾತನಾಡಿ, ಅರಣ್ಯ ಸಂರಕ್ಷಣೆ ಎಲ್ಲರ ಹೊಣೆ ಪರಿಸರ ನಾಶವಾದರೆ ಇಡಿಯ ವಿಶ್ವವೇ ಗಂಭೀರ ಪರಿಣಾಮ ಎದುರಿಸಬೇಕಾದ ಕಾರಣ ಪ್ರತಿಯೊಬ್ಬರ ವೃಕ್ಷ ಸಂಕುಲ ರಕ್ಷಣೆಯಲ್ಲಿ ತೊಡಗಬೇಕೆಂದರು.


ಈ ಸಂದರ್ಭ ನ್ಯಾಯಾಲಯದ ಶಿರಾಸ್ತೆದಾರ್ ನೇತ್ರಾವತಿ,  ಭಾಗ್ಯ, ಎ.ಪಿ.ಪಿ ಗೋಪಾಲ್ ವಕೀಲರ ಸಂಘದ ಅಧ್ಯಕ್ಷರಾದ ವಾಲೇಮನೆ ಶಿವಕುಮಾರ್, ವಕೀಲರಾದ ಹಿರಿಯಪ್ಪ, ಗುರು ಮಂಡಾನಿ, ಅರಣ್ಯ ಇಲಾಖೆಯ ಎಸಿಎಫ್ ಪ್ರಕಾಶ್ ಕೆ.ಜಿ, ಆರ್‌ಎಫ್‌ಓ ರಾಘವೇಂದ್ರ, ಷಣ್ಮುಖ ಪಾಟೇಲ್, ನರೆಂದ್ರಕುಮಾರ್  ಶಶಿಕುಮಾರ್, ಪ್ರಮೋದ್, ಜಗದೀಶ್, ಚಂದ್ರಪ್ಪ, ಷಣ್ಮಖಪ್ಪ, ರೇಖಾ ಹರೀಶ್, ಗುರುಕಿರಣ್, ಬಸವರಾಜ್ ಗಗ್ಗ, ಮಹೇಶ್ ವೈ.ಪಿ, ಗುರು ಇನ್ನೂ ಮುಂತಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago