Categories: Hosanagara News

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವೂ ಹೌದು, ಯುದ್ದವೂ ಹೌದು ; ಶಾಸಕ ಹರತಾಳು ಹಾಲಪ್ಪ


ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಎನ್ನುವುದು ಒಂದು ಹಬ್ಬ. ಅದನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.


ಅವರು ಪಟ್ಟಣದಲ್ಲಿ ಶನಿವಾರ ಪಕ್ಷದ ನೂತನ ಚುನಾವಣಾ ಕಛೇರಿಯನ್ನು ಉದ್ಘಾಟಿಸಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನೂತನ ಕಛೇರಿಯು ಪಕ್ಷದ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡಲಿದೆ. ಬಿಜೆಪಿಯು ಚುನಾವಣೆಯನ್ನು ಯುದ್ದದ ಮಾದರಿಯಲ್ಲಿ ಸ್ವೀಕಾರ ಮಾಡಿದೆ. ವಾರ್ ರೂಮ್‌ಗಳನ್ನು ತೆರೆದು ದಿನದ 24 ಗಂಟೆಗಳ ಕಾಲವೂ ಬೆಂಗಳೂರಿನಲ್ಲಿ ಪಕ್ಷದ ಕಛೇರಿ ಕಾರ್ಯನಿರ್ವಹಿಸುತ್ತಿದೆ ಎಂದರು.


ಜಿಲ್ಲಾ ರಾಜಕಾರಣ ಹಾಗೂ ಸಾಗರ ಕ್ಷೇತ್ರದಲ್ಲಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಯಾರೂ ಊಹಿಸದ ಬದಲಾವಣೆಗಳು ನಡೆಯಲಿವೆ. ಅಭ್ಯರ್ಥಿಗೆ ಕಾರಣವಾಗುವಂತೆ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿಯೂ ಒಂದಿಷ್ಟು ಒಳ್ಳೆಯ ಬದಲಾವಣೆಗಳು ಆಗಲಿದೆ. ಪಕ್ಷದ ಸೂಚನೆಗಳನ್ನು ಬೂತ್ ಸಮಿತಿಯ ಕಾರ್ಯಕರ್ತರೂ ಈ ಬದಲಾವಣೆಗಳಿಗೆ ಸಿದ್ದರಿರಬೇಕು ಎಂದರು.


ರಾಜಕೀಯದಲ್ಲಿ ಪರ ವಿರೋಧ ಸಹಜ. ಚುನಾವಣೆಯನ್ನು ಯುದ್ಧ ಎಂದೂ ಭಾವಿಸುತ್ತಾರೆ. ಯುದ್ಧದಲ್ಲಿ ಗೆಲ್ಲುವುದೇ ಮುಖ್ಯ. ಧಕ್ಷತೆ, ಚಾಕಚಕ್ಯತೆಯಿಂದ ಗೆಲ್ಲಲು ಸಾಧ್ಯ. ಯುದ್ದ ಕಾಲದಲ್ಲಿ ಯಾರಿಂದ ಹೇಗೆ ಸಹಾಯ ಸಿಕ್ಕರೂ ಸ್ವೀಕರಿಸಬಹುದು. ಮಾನಾಪಮಾನಗಳು ಆ ವೇಳೆ ನಗಣ್ಯ. ಇದನ್ನು ಭಗವಾನ್ ಶ್ರೀಕೃಷ್ಣನೇ ಹೇಳಿದ್ದಾನೆ. ಎಲ್ಲವನ್ನೂ ಧನಾತ್ಮಕವಾಗಿಯೇ ಸ್ವೀಕಾರ ಮಾಡಬೇಕಿದೆ. ಪಕ್ಷದ ಕಾರ‍್ಯಕರ್ತರು ಸಂಘಟನಾತ್ಮಕವಾಗಿ ಹೋರಾಡಬೇಕಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.


ಕಂಸ ಎಂದವರೇ ಭೀಷ್ಮ ಎನ್ನತೊಡಗಿದ್ದಾರೆ:
ಅಂದು ಕಂಸ ಎಂದು ಹೀಯಾಳಿಸಿದ್ದ ಹಿರಿಯ ರಾಜಕಾರಣಿಯನ್ನು ಇಂದು ಭೀಷ್ಮಎಂದು ಹೊಗಳಿಕೊಂಡು ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಭೀಷ್ಮ ಜೊತೆಗಿದ್ದರೂ ಕೌರವರು ಸೋತರು. ಭೀಷ್ಮ ಇದ್ದಲ್ಲಿ ಸೋಲು ನಿಶ್ಚಿತ ಎಂದು ಪರೋಕ್ಷವಾಗಿ ಬೇಳೂರು ಗೋಪಾಲಕೃಷ್ಣ ಅವರನ್ನು ಟೀಕಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಗಣಪತಿ ಬಿಳಗೋಡು, ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಶಾಸಕ ಬಿ.ಸ್ವಾಮಿರಾವ್, ಪಕ್ಷದ ತಾಲೂಕು ಚುನಾವಣಾ ನಿರ್ವಾಹಕ ಆರ್.ಟಿ.ಗೋಪಾಲ್, ಪ್ರಮುಖರಾದ ಸಾಗರ ಪ್ರಶಾಂತ್, ಅಂಬೇಡ್ಕರ್ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ, ಹಿರಿಯರಾದ ಉಮೇಶ ಕಂಚುಗಾರ್, ಶ್ರೀಧರ ಉಡುಪ, ಎ.ವಿ.ಮಲ್ಲಿಕಾರ್ಜುನ್, ಮನೋಧರ, ಗುಲಾಬಿ ಮರಿಯಪ್ಪ, ಶಿವಾನಂದ, ಗಣೇಶ್, ಅಭಿಲಾಷ್, ರಾಜೇಶ್ ಕೀಳಂಬಿ, ಟೌನ್ ಘಟಕದ ಅಧ್ಯಕ್ಷ ಶಿವಕುಮಾರ್ ಮಂಜುನಾಥ್ ಹೆಚ್.ಎಸ್, ಮಂಡಾಣಿ ಮೋಹನ್ ಮತ್ತಿತರರು ಹಾಜರಿದ್ದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

3 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

5 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

18 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

20 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

21 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

21 hours ago