ರಿಪ್ಪನ್ಪೇಟೆ : ಫಲವತ್ತಾದ ಮಣ್ಣಿನಿಂದ ಉತ್ತಮ ಹಾಗೂ ಗುಣಮಟ್ಟದ ಆರೋಗ್ಯಕರ ಆಹಾರ ಉತ್ಪನ್ನಗಳನ್ನು ತಯಾರಿಸಲು ಸಾಧ್ಯ. ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಗಣಪತಿ ಹೇಳಿದರು.
ಗವಟೂರು ಗ್ರಾಮದ ಕೃಷಿಕ ರಾಮಚಂದ್ರ ತೋಟದಲ್ಲಿ ರೋಟರಿ ಕ್ಲಬ್ ರಿಪ್ಪನ್ಪೇಟೆ ಹಾಗೂ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಇವರ ಸಹಯೋಗದೊಂದಿಗೆ ಆಯೋಜಿಸಲಾದ ಮಣ್ಣೇಹೊನ್ನು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಅವರು, ಮಣ್ಣಿನ ಫಲವತ್ತತೆ ನೈಸರ್ಗಿಕವಾದುದು, ಇತ್ತೀಚಿಗೆ ಅಧಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯ ಜೊತೆಗೆ ತನ್ನ ಆರೋಗ್ಯವನ್ನು ಕಳೆದುಕೊಳ್ಳುತ್ತಿದೆ. ನಾವು ಸತ್ತರೆ ಮಣ್ಣು ಸೇರುತ್ತೇವೆ. ಮಣ್ಣು ಸತ್ತರೆ ಮಾಡುವುದೇನು ಎಂದು ಹೇಳಿದ ಅವರು, ಇತ್ತೀಚೆಗೆ ಮಣ್ಣಿನಲ್ಲಿ ಕಂಡುಬರುತ್ತಿರುವ ಸಮಸ್ಯೆಗಳು ಹಾಗೂ ಅದರ ನಿವಾರಣೆಗೆ ಕೃಷಿಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ಡಾ. ಕೆ.ಎಸ್. ನಿರಂಜನ್ ಮಾತನಾಡಿ, ಮಣ್ಣು ಪರೀಕ್ಷೆ ಯಾಕಾಗಿ ಮಾಡಬೇಕು. ಮಣ್ಣು ಮಾದರಿಯನ್ನು ವೈಜ್ಞಾನಿಕ ರೀತಿಯಲ್ಲಿ ಹೇಗೆ ತೆಗೆಯುವುದು. ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿಯುವ ಬಗೆ ಹಾಗೂ ಅಡಿಕೆ ಸಿಪ್ಪೆಯಿಂದ ಗೊಬ್ಬರ ಮಾಡುವ ವಿಧಾನದ ಮಾಹಿತಿ ನೀಡಿ, ಕೃಷಿ ಮತ್ತು ತೋಟಾರಿಕೆಗೆ ಸಂಭಂದಪಟ್ಟ ಯಾವುದೇ ಸಮಸ್ಯೆಯಿದ್ದಲ್ಲಿ ರೈತರು ನೇರವಾಗಿ ವಿಶ್ವವಿದ್ಯಾಲಯವನ್ನು ಸಂಪರ್ಕಿಸಬಹುದು ಆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬಹುದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರೈತರಿಗೆ ಮಣ್ಣಿನ ಮಾದರಿ ತೆಗೆಯುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು.
ರಿಪ್ಪನ್ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ಎಂ.ಪರಮೇಶ್ ಮಾತನಾಡಿ, ರೈತರುಗಳ ಕೃಷಿ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಯೋಜನೆ ಅನುಷ್ಠಾನಗೊಳಿಸಿ ಹಾಗೆ ರೈತರಿಗೆ ಬಡ್ಡಿರಹಿತ ಸಾಲ ನೀಡುತ್ತಿದೆ. ಇದರ ಸದುಪಯೋಗ ಪಡೆಯುವ ಮೂಲಕ ರೈತರು ಆರ್ಥಿಕ ಅಭಿವೃದ್ಧಿ ಹೊಂದಿ ಸ್ವಾವಲಂಬಿಯಾಗಿ ಬದುಕಲು ಸಹಕಾರಿಯಾಗಿದೆ ಎಂದರು.
ಕೃಷಿ ಸಂಪರ್ಕ ಕೇಂದ್ರದ ಅಧಿಕಾರಿ ಶಾಂತಮೂರ್ತಿ ಮಾತನಾಡಿ, ಮಣ್ಣನ್ನು ಹೊನ್ನಿಗೆ ಹೋಲಿಸಿ ಹೊನ್ನಿಗಿಂತಲು ಶ್ರೇಷ್ಠವಾದದ್ದು ಮಣ್ಣು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆ ಅಧ್ಯಕ್ಷ ದೇವದಾಸ್ ಆರ್.ಎಚ್. ವಹಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ, ಗಣಪತಿ ಹೆಚ್.ಎಸ್., ಕೃಷಿ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಎಸ್. ಜಿ .ಶಶಿಕಲಾ ಹಾಗೂ ರೋಟರಿ ಸಂಸ್ಥೆಯ ಎಂ.ಬಿ ಲಕ್ಷ್ಮಣಗೌಡ, ಡಾ. ಬಿ.ಕೆ.ಶಿವಣ್ಣ,ಮುಖ್ಯಸ್ಥರು ರೈತ ತರಬೇತಿ ಕೇಂದ್ರ,ಇರುವಕ್ಕಿ ಇನ್ನಿತರರಿದ್ದರು.
ದೇವದಾಸ್ ಆರ್.ಹೆಚ್. ಸ್ವಾಗತಿಸಿ, ಕು|| ನವ್ಯ ನಿರೂಪಿಸಿ, ರೋಟರಿ ಸಂಸ್ಥೆ ಕಾರ್ಯದರ್ಶಿಎಂ ರಾಮಚಂದ್ರ ವಂದಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…