ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಫೆಬ್ರವರಿ 7 ರಂದು ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆಯವರೆಗೆ ನಡೆಯಲಿದೆ ಎಂದು ದೇವಸ್ಥಾನ ಧರ್ಮದರ್ಶಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 600 ವರ್ಷ ಇತಿಹಾಸವಿರುವ ಈ ಮಾರಿಕಾಂಬಾ ದೇವಿ ಜಾತ್ರೆ ಪ್ರತಿ ವರ್ಷದಲ್ಲಿ ಎರಡು ಬಾರಿ ಜರುಗುತ್ತದೆ. ಕರ್ನಾಟಕದ ಯಾವ ಭಾಗದಲ್ಲೂ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ. ಮಳೆಗಾಲದ ಆಷಾಢ ಮಾಸದ ಮಂಗಳವಾರ ಹಾಗೂ ಬೇಸಿಗೆಯ ಶೂನ್ಯ ಮಾಸದ ಬುಧವಾರದಂದು ಜರುಗುವ ಈ ಜಾತ್ರೆಯಲ್ಲಿ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯದ ಸಾವಿರಾರು ಭಕ್ತರು ಆಗಮಿಸಿ ಶ್ರೀದೇವಿಗೆ ಪೂಜೆ ಸಲ್ಲಿಸುತ್ತಾರೆ.
ಮಳೆಗಾಲದಲ್ಲಿ ಭಕ್ತರು ತಮ್ಮ ಜಮೀನಿನಲ್ಲಿ ಹಾಕಲಾದ ಫಸಲಿಗೆ ಕಾಡು ಪ್ರಾಣಿಗಳ ಉಪಟಳ ಹಾಗೂ ರೋಗ ರುಜಿನೆ ಬಾರದಂತೆ, ಹೆಣ್ಣು ಮಕ್ಕಳಿಗೆ ವಿವಾಹ ಭಾಗ್ಯ ಹೀಗೆ ಸಂತಾನ ವೃದ್ಧಿಗಾಗಿ ಪ್ರಾರ್ಥಿಸಿ ಹರಕೆ ಕಾಣಿಕೆ, ಹಣ್ಣು-ಕಾಯಿ ಪೂಜೆ ಸಲ್ಲಿಸುವುದು ಇಲ್ಲಿನ ಪದ್ದತಿಯಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…