Categories: Hosanagara News

ಬಿಸಿಎಂ ಹಾಸ್ಟೆಲ್ ಸೀಟು ದೊರಕಿಸಿಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ

ಹೊಸನಗರ : ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು ಜುಲೈ 10 ಕಳೆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲವೆಂದು ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸ ಕೊಡಬೇಕೆಂದು ಮಕ್ಕಳ ಪೋಷಕರು ಸೋಮವಾರ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಚೇರಿಗೆ ಲಗ್ಗೆ ಇಟ್ಟು ಸಮಸ್ಯೆ ಬಗೆಹರಿಸುವಂತೆ ಶಾಸಕರ ಆಪ್ತ ವಲಯದ ಸಣ್ಣಕ್ಕಿ ಮಂಜು ಅವರಿಗೆ ಶಾಸಕರ ಗಮನ ಸೆಳೆಯುವಂತೆ ಮನವಿ ಪತ್ರ ಸಲ್ಲಿಸಿದರು.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕರ ಕಚೇರಿಯಿದ್ದು ಹಾಸ್ಟೆಲ್ ಸೌಲಭ್ಯ ವಂಚಿತ ಪೋಷಕರು ತಾಲೂಕು ಪಂಚಾಯತ್ ಸಭಾಂಗಣಕ್ಕೆ ಬಂದ ವಿಷಯ ತಿಳಿದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈ. ನರೇಂದ್ರ ಕುಮಾರ್ ಶಾಸಕರ ಕಚೇರಿಗೆ ಆಗಮಿಸಿ ಶಾಸಕರ ಆಪ್ತವಲಯದ ಸಣ್ಣಕ್ಕಿ ಮಂಜು ರವರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ತಾಲೂಕು ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ರಾಘವೇಂದ್ರ ಅವರನ್ನು ಕರೆಸಿ ಸಮಾಲೋಚನೆ ನಡೆಸಿ ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಭರವಸೆ ಪಡೆದರು.

ಶಾಲಾ ಮಕ್ಕಳು ದೂರದ ಮುಳುಗಡೆ ಪ್ರದೇಶದಿಂದ 7-8 ಕಿ.ಮೀ ನಡೆದುಕೊಂಡು ಬರಬೇಕಾಗಿದ್ದು ಅಲ್ಲದೆ ತೀರ ಬಡ ಕುಟುಂಬದ ಮಕ್ಕಳು ಆದ ಕಾರಣ ತತಕ್ಷಣ ಮಕ್ಕಳ ಶಿಕ್ಷಣಕ್ಕೆ ಸ್ಪಂದಿಸುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸಿದರು.

ಕೊಡಸೆಯ ಗಿರೀಶ್, ಕೃಷ್ಣಪ್ಪ, ಕಲಾವತಿ, ತೊಗರೆ ಕೃಷ್ಣಮೂರ್ತಿ, ಮಂಜಪ್ಪ ಹೀಲಗೋಡು, ಹೆಬ್ಬುರಳಿ ಹರೀಶ, ಪದ್ಮಾವತಿ, ಲೀಲಾವತಿ ಪುರುಷೋತ್ತಮ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

11 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

14 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

15 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

21 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago