ಹೊಸನಗರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಮಕ್ಕಳ ಬೇಸಿಗೆ ಶಿಬಿರ ಅನುಕೂಲಕರವಾಗಿರುತ್ತದೆ ಎಂದು ಪರಿಸರವಾದಿ ಹನಿಯಾ ರವಿಯವರು ಹೇಳಿದರು.
ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ರಂಗ ಶಿಕ್ಷಣ ಪ್ರಧಾನವಾಗಿ ಕೇಂದ್ರಿಕೃತವಾದ ಬೇಸಿಗೆ ಶಿಬಿರ ಡ್ರಿಮ್ಸ್ ಆಫ್ ಡ್ರಾಮ ಏಪ್ರಿಲ್10 ರಿಂದ 26 ರವರೆಗೆ ಆರಂಭವಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆಗಳನ್ನು ಹೊರ ಹಾಕಬೇಕಾದರೆ ಅವರಿಗೆ ವೇದಿಕೆ ಅಗತ್ಯವಾಗಿಬೇಕು ಅದರ ಜೊತೆಗೆ ತನ್ನ ಮನಸ್ಸಿನಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಗುರುಗಳು ಇರಬೇಕು. ಗುರುವಿನ ಮೂಲಕ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದಾಗ ಗುರುಗಳ ಮೂಲಕ ಗುರುಗಳು ಅನಾವರಣಗೊಂಡ ತನ್ನ ಮನಸ್ಸಿನ ಭಾವನೆಗಳಿಗೆ ಸ್ಪಂದಿಸಿ ಮಕ್ಕಳ ಮನಸ್ಸಿನ ಮೇಲೆ ಧೈರ್ಯ ತುಂಬಿದಾಗ ಆ ಮಕ್ಕಳು ಧೈರ್ಯದಿಂದ ಪ್ರದರ್ಶನ ಮಾಡಲು ಸಾಧ್ಯ. ಇದಕ್ಕಾಗಿಯೇ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ ಇದರ ಉಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು.
ಈ ಸಮಾರಂಭದಲ್ಲಿ ಗ್ರಾಮ ಭಾರತಿ ಟ್ರಸ್ಟ್ನ ಮುಖ್ಯಸ್ಥರಾದ ಹನಿಯಾ ರವಿ ಶಿಬಿರವನ್ನು ಉದ್ಘಾಟಿಸಿದರು. ಹೊಸನಗರ ತಾಲ್ಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾದ ಎಂ ಕೆ ವೆಂಕಟೇಶಮೂರ್ತಿ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಗ್ರಾಮಭಾರತಿ ಟ್ರಸ್ಟ್ ಕಾರಣಗಿರಿ ಇವರ ಸಹಯೋಗದೊಂದಿಗೆ ರಂಗಾಯಣ ಮೈಸೂರು ಇಲ್ಲಿ ತರಬೇತಿ ಹೊಂದಿದ ರಂಗಕರ್ಮಿ ನಟ ಶ್ರೀಧರ್ ಮತ್ತು ಇವರ ತಂಡದ ನೇತೃತ್ವದಲ್ಲಿ ಶಿಬಿರ ಆಯೋಜನೆಗೊಂಡಿದೆ. ನಾಟಕ ರಂಗಸಂಗೀತ ಮಣ್ಣಿನ ಮಾದರಿ ಕಲೆ, ಕೋಲಾಟ, ನೃತ್ಯ ಮಕ್ಕಳ ಚಿತ್ರಗಳ ಪ್ರದರ್ಶನ ಕರಕುಶಲ ವಸ್ತುಗಳ ತಯಾರಿಕೆ ಹೀಗೆ ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಅಂಶಗಳ ಬಗ್ಗೆ ಶಿಬಿರದಲ್ಲಿ ಮಕ್ಕಳು ತರಬೇತಿಯನ್ನು ಹೇಳಿಕೊಡಲಾಗುತ್ತಿದೆ ಇದರ ಉಪಯೋಗವನ್ನು ಎಲ್ಲ ಮಕ್ಕಳು ಪಡೆದುಕೊಳ್ಳಬೇಕೆಂದರು.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…