ಹೊಸನಗರ: ತಾಲ್ಲೂಕಿನಲ್ಲಿ ಸರ್ಕಾರಿ ಸೌಲಭ್ಯ ಪಡೆಯುತ್ತಿರುವವರು ತಕ್ಷಣ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳದಿದ್ದರೇ ಮುಂದಿನ ದಿನದಲ್ಲಿ ಸರ್ಕಾರಿ ಸೌಲಭ್ಯ ಪಡೆಯುತ್ತಿರುವವವರು ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತೀರಿ ಎಂದು ಹೊಸನಗರ ತಾಲ್ಲೂಕು ಕಛೇರಿಯ ಉಪತಹಶೀಲ್ದಾರ್ ರಾಕೇಶ್ ಬ್ರಿಟ್ಟೋರವರು ಹೇಳಿದರು.
ಅವರು ತಾಲ್ಲೂಕು ಕಛೇರಿಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಇಂದಿರಾ ಗಾಂಧಿ ವೃದ್ಯಾಪ್ಯ ಯೋಜನೆ, ವಿಧವಾ ವೇತನ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲ ಪೋಷಣೆ ಯೋಜನೆ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯುತ್ತಿರುವ ಪಲಾನುಭವಿಗಳು ಬ್ಯಾಂಕ್ ಮತ್ತು ಅಂಚೆ ಕಛೇರಿಗಳಲ್ಲಿ ತಮ್ಮ ಖಾತೆಗೆ ಆಧಾರ್ ಕಾರ್ಡ್ ಜೊಡಣೆ ಮಾಡಿಸದಿದ್ದರೇ ಪುನಃ ಪರಿಶೀಲಿಸಿ ಆಧಾರ್ ಸಂಖ್ಯೆಗಳು ಎನ್ಪಿಸಿಯನ್ನು ಲಿಂಕ್ ಮಾಡಿಸುವಂತೆ ತಿಳಿಸಿದ್ದಾರೆ.
ಹೊಸನಗರ ತಾಲ್ಲೂಕಿನಲ್ಲಿ ಸುಮಾರು 6 ಸಾವಿರ ಫಲಾನುಭವಿಗಳು ಈ ಸೌಲಭ್ಯ ಪಡೆಯುತ್ತಿದ್ದು ಅದರಲ್ಲಿ 5 ಸಾವಿರ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡಿದ್ದು ಸುಮಾರು 1ಸಾವಿರ ಜನರು ಇನ್ನೂ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಕೊಂಡಿಲ್ಲ. ತಕ್ಷಣ ಮಾಡಿಸಿಕೊಳ್ಳಬೇಕೆಂದು ಕೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಗ್ಯ, ಚಿರಾಗ್, ಗ್ರಾಮ ಆಡಳಿತಾಧಿಕಾರಿ ಕೌಶಿಕ್, ನವೀನ್, ಗುಮಾಸ್ಥ ಸತೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…