ಭೂಪರಿವರ್ತನೆ ಲೇಔಟ್‌ಗಳು ನಿಯಮ ಉಲ್ಲಂಘನೆ ಆರೋಪಕ್ಕೆ ನಿರೂಪ್ ಸ್ಪಷ್ಟನೆ

0 725

ರಿಪ್ಪನ್‌ಪೇಟೆ: ಇಲ್ಲಿನ ಗ್ರಾಮ ಪಂಚಾಯತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪಕ್ಕೆ ಸ್ಪಷ್ಟನೆ ನೀಡಿದ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಆರ್., ಸಾಮಾನ್ಯ ಸಭೆಯಲ್ಲಿ ಮಾತನಾಡದೆ ಬಹಿರಂಗವಾಗಿ ಆರೋಪಿಸಲಾಗಿರುವುದು ಖಂಡನೀಯ ಎಂದು ಹೇಳಿ, ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆಯವರು ಕಾನೂನು ಬದ್ದವಾಗಿಯೇ ತಾಂತ್ರಿಕ ಅನುಮೋದನೆ ನೀಡಿದ್ದಾರೆಂದು ಸ್ಪಷ್ಟನೆ ನೀಡಿದರು.

ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗವಟೂರು ಗ್ರಾಮದ ಸರ್ವೇ ನಂ 361/2 ರಲ್ಲಿ 1.09 ಎಕರೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿಸಲು ಖತಿಜಾಭಿ ಕೋಂ ಖಾಸಿಂಸಾಬ್ ಇವರು ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಇರುವುದು ವಾಸ್ತವವಾಗಿದ್ದು ಗ್ರಾಮ ಪಂಚಾಯ್ತಿ ಅಭಿವೃದ್ದಿ ಆಧಿಕಾರಿಗಳು ನಿರಾಕ್ಷೇಪಣಾ ಪತ್ರ ನೀಡಿರುತ್ತಾರೆ ಎಂದು ತಿಳಿಸಿದರು.

ಆರೋಪಿಸಿರುವ ಗ್ರಾಮ ಪಂಚಾಯತಿ ಸದಸ್ಯರು ಈ ಹಿಂದೆ ಲೇಔಟ್ ಮಾಲೀಕರನ್ನು ಬ್ಲಾಕ್ ಮೇಲ್ ಮಾಡಿ ಸಿಂಥೆಟಿಕ್ಸ್ ಡ್ರಮ್ ಪಡೆದು ಈಗ ತಿರುಗಿ ಬಿದ್ದಿದ್ದಾರೆ ಕಾರಣ, ತಮ್ಮ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಚಾರದಲ್ಲಿ ಈ ರೀತಿಯಲ್ಲಿ ಸುಳ್ಳು ಆರೋಪ ಮಾಡುತ್ತಿದ್ದು ಅದಕ್ಕೆ ಸಂಬಂಧಪಟ್ಟ ಗ್ರಾಮಾಡಳಿತದವರು ದಾಖಲೆಗಳನ್ನು ಜೋಪಾನ ಮಾಡಿಕೊಳ್ಳುವ ಜವಾಬ್ದಾರಿಯಾಗಿದ್ದು ದಾಖಲೆಯಿಲ್ಲ ಎಂದು ಹೇಳಿಕೊಂಡಿರುವುದರ ಬಗ್ಗೆ ಇಲಾಖೆಯ ಜವಾಬ್ದಾರಿಯಾಗಿದೆ ಎಂದ ಅವರು, ಲೇಔಟ್ ಮಾಡುವಾಗ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸುವಂತಹ ರಸ್ತೆ ಸಂಪರ್ಕ ಬೀದಿ ದೀಪ ಒಳಚರಂಡಿ ಪಾರ್ಕ್ ಸಿಎ ನಿವೇಶನಗಳ ಹೀಗೆ ಮೂಲಸೌಲಭ್ಯಗಳ ನೀಲನಕ್ಷೆಯಂತೆ ನಗರ ಮತ್ತು ಗ್ರಾಮೀಣ ಯೋಜನೆಯವರ ತಾಂತ್ರಿಕ ಅನುಮೋದನೆ ನೀಡುತ್ತಾರೆ ಮತ್ತು ಈಗಾಗಲೇ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಲೇಔಟ್ ಮಾಲೀಕರ ಬಗ್ಗೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದ್ದಾರೆ. ಈ ಬಗ್ಗೆ ಹೆದರುವ ಪ್ರಶ್ನೆಯೇ ಇಲ್ಲ, ಎದುರಿಸಲು ಸಿದ್ದವಿರುವುದಾಗಿ ಹೇಳಿ, ಕಾನೂನು ಬದ್ದವಾಗಿಯೇ ಇರುವವರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅನ್ವರ್ ಹಾಜರಿದ್ದರು.

Leave A Reply

Your email address will not be published.

error: Content is protected !!