ಹೊಸನಗರ : ಮಲೆನಾಡಿನಲ್ಲಿ ಮದುವೆ ಮನೆ ಎಷ್ಟೋಂದು ತಳಿರು ತೋರಣಗಳಿಂದ ಅಲಂಕಾರಿಸಿರುತ್ತಾರೆ ನೋಡಿದ್ದಿರಾ,, ಅಲ್ವಾ, ಹಾಗೆ ಇಲ್ಲಿ ಒಂದು ಶಾಲೆಗೆ ಮದುವೆ ಮನೆ ಹಾಗೆಯೇ ಸಿಂಗಾರ ಮಾಡಲಾಗಿದೆ. ಅದು ಯಾಕೆ ಅಂದ್ರೆ ಇಲ್ಲಿದೆ ನೋಡಿ ವಿವರ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 242 ಕ್ಕೆ ಅಲಂಕಾರಿಸಲಾಗಿದೆ.
ಸ್ಥಳಿಯ ಆಡಳಿತದಿಂದ ಮಲೆನಾಡಿನ ಭಾಗದಲ್ಲಿ ಶುಭ ಸಮಾರಂಭಗಳಲ್ಲಿ ಮನೆಯ ಅಂಗಳದಲ್ಲಿ ಮಾಡಲಾಗುವ ತೆಂಗಿನ ಗರಿ, ಮಾವಿನ ಎಲೆಗಳಿಂದ ತಳಿರು ತೋರಣ, ಮಾವಿನ ಕಾಯಿ, ಬಾಳೆಯಿಂದ ಮೊದಲಾದವುಗಳಿಂದ ಶೃಂಗಾರಗೊಳಿಸಲಾಗಿದೆ.
ಹೌದು, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ಕೆಲ ಊರಿಗಳಲ್ಲಿ ಊರಿನ ಸಂಪ್ರದಾಯದ ಪ್ರಕಾರ ಮತಗಟ್ಟೆ ನಿರ್ಮಾಣ ಹಾಗೂ ಸಖಿ ಮತಗಟ್ಟೆ ನಿರ್ಮಾಣ ಮಾಡಲಾಗಿದೆ, ಇದೇ ರೀತಿಯಾಗಿ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿಯ ಹಿರಿಯ ಪ್ರಾಥಮಿಕ ಶಾಲೆಯ 242ನೇ ಮತಗಟ್ಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಸಂಪ್ರದಾಯದ ಮತಗಟ್ಟೆ ನಿರ್ಮಾಣ ಮಾಡಲಾಗಿದೆ.
ಮಲೆನಾಡಿನ ಭಾಗದಲ್ಲಿ ಶುಭ ಸಮಾರಂಭಗಳಲ್ಲಿ ಮನೆಯ ಅಂಗಳದಲ್ಲಿ ಮಾಡಲಾಗುವ ಚಪ್ಪರ, ತೆಂಗಿನ ಗರಿ ಮಾವಿನ ಎಲೆಗಳಿಂದ ತೋರಣ, ಮಾವಿನ ಕಾಯಿ, ಬಾಳೆ ಮರ ಮೊದಲಾದವುಗಳಿಂದ ಅಲಂಕಾರ ಮಾಡಲಾಗಿದೆ.ಒಟ್ಟಿನಲ್ಲಿ ಜಿಲ್ಲಾಡಳಿತ ಹಾಗೆ ಸ್ಥಳೀಯ ಆಡಳಿತದ ಈ ಒಂದು ವಾತಾವರಣ ಸೃಷ್ಟಿ ಮಾಡಿರುವುದಕ್ಕೆ ಮಲೆನಾಡಿನ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿರುವುದೇಂತೂ ನಿಜ,
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…