ರಿಪ್ಪನ್ಪೇಟೆ: ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್ಗಳು ನಿಯಮವನ್ನು ಉಲ್ಲಂಘಿಸಿದ್ದು ಈ ಕುರಿತು ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕೆಂದು ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪಿಸಿದರು.
ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗವಟೂರು ಗ್ರಾಮದ ಸರ್ವೇ ನಂ 361/2 ರಲ್ಲಿ 1.09 ಎಕರೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿಸಲು ಅರ್ಜಿಸಲ್ಲಿಸಿರುತ್ತಾರೆ. ಆದರೆ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನಿಯಾಮಾನುಸಾರ ಇಲ್ಲದೆ ಇರುವುದು ವಾಸ್ತವವಾಗಿದ್ದು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು 30 ಅಡಿ ರಸ್ತೆ ಇರುವುದಕ್ಕೆ ನಿರಾಕ್ಷೇಪಣಾ ಪತ್ರ ನೀಡಿರುತ್ತಾರೆ ಎಂದು ತಿಳಿಸಿದರು.
ಅರ್ಜಿದಾರರು ಭೂಪರಿವರ್ತನಾ ನಿರಾಕ್ಷೇಪಣಾ ಪತ್ರಕ್ಕಾಗಿ ಅರ್ಜಿಸಲ್ಲಿದ್ದ ಪ್ರಯುಕ್ತ 2022 ರ ಮಾ.23 ರಂದು ಒಂದೇ ದಿನ ಗ್ರಾಮ ಪಂಚಾಯ್ತಿ ಎರಡು ನಿರಾಕ್ಷೇಪಣಾ ಪತ್ರವನ್ನು ನೀಡಿದೆ. ಆದರೆ ಎರಡೂ ಪತ್ರದಲ್ಲಿಯೂ ರಸ್ತೆಯ ಬಗ್ಗೆ ಎರಡು ಅಭಿಪ್ರಾಯವನ್ನು ನೀಡಿರುತ್ತಾರೆ. ಒಂದರಲ್ಲಿ 30 ಅಡಿ ರಸ್ತೆಯಿದೆ ಎಂದು ದೃಢೀಕರಿಸಿದರೆ ಇನ್ನೊಂದರಲ್ಲಿ ರಸ್ತೆಯ ಉಲ್ಲೇಖವೇ ಇರುವುದಿಲ್ಲ. ಇದರಿಂದ ದಲ್ಲಾಳಿಗಳು ದಾಖಲೆ ಸೃಷ್ಟಿಸುವಲ್ಲಿ ಅಸಲಿ-ನಕಲಿ ಆಟವಾಡಿದ್ದಾರೆ ಎಂಬ ಅನುಮಾನ ಮೂಡಿದೆ ಎಂದು ದೂರಿದರು.
ಮಾಹಿತಿ ಹಕ್ಕಿನಡಿ ದಾಖಲಾತಿ ಪಡೆದಾಗ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ದಾಖಲಾಯಲ್ಲಿ ಮಾತ್ರ 30 ಅಡಿ ರಸ್ತೆ ಇರುವ ಗ್ರಾಮ ಪಂಚಾಯ್ತಿ ದೃಢೀಕೃತ ಪತ್ರವಿದ್ದು ಗ್ರಾಮ ಪಂಚಾಯ್ತಿ ಕಡತದಲ್ಲಿ ಈ ದಾಖಲೆಯೇ ಇರುವುದಿಲ್ಲ. ಇದರ ನ್ಯೂನ್ಯತೆಯನ್ನು ಅರಿತು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅರ್ಜಿಸಲ್ಲಿಸಿದಾಗ ಪಂಚಾಯ್ತಿ ಅಭಿವೃದ್ಧಿ ಆಧಿಕಾರಿಗಳು ಸ್ಥಳ ಪರಿಶೀಲನೆಯಲ್ಲಿ 22 ಅಡಿ ರಸ್ತೆಯಿದೆ ಎಂಬುದು ವರದಿ ನೀಡಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಾದ್ಯಂತ ಹಲವು ಲೇಔಟ್ಗಳಲ್ಲಿಯೂ ಇದೇ ರೀತಿಯ ನಿಮಯ ಉಲ್ಲಂಘನೆಯಾಗಿರುವುದು ಕಾಣಬಹುದು. ಈ ಎಲ್ಲಾ ದಾಖಲಾತಿಗಳ ಮರುಸೃಷ್ಠಿಯಲ್ಲಿ ಭೂಮಾಫಿಯಾ ತಂಡ ಕಾರ್ಯನಿರ್ವಹಿಸುತ್ತಿದ್ದು ಜನಸಾಮಾನ್ಯರಿಗೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಲೇಔಟ್ಗಳ ಭೂ ಪರಿವರ್ತನೆಯನ್ನು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮಜರುಗಿಬೇಕು. ಪ್ರತಿನಿತ್ಯ ಗ್ರಾಮ ಪಂಚಾಯ್ತಿನಲ್ಲಿ ಭೂಮಾಫಿಯಾದವರೆ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುತ್ತಿದ್ದು ಜನಸಾಮಾನ್ಯರನ್ನು ಕಡೆಗಣಿಸಲಾಗುತ್ತಿದೆ. ಸಮಗ್ರ ತನಿಖೆಯೊಂದಿಗೆ ಭೂಮಾಫಿಯಾದವರ ಆಟಾಟೋಪಕ್ಕೆ ಕಡಿವಾಣ ಹಾಕಿ ನಿವೇಶನ ಖರೀದಿದಾರರಿಗೆ ನಿಯಮಾನುಸಾರ ಮೂಲ ಸೌಕರ್ಯ ಒದಗಿಸುವಂತಾಗಬೇಕೆಂದು ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…