Categories: Hosanagara News

ಮೀನುಗಾರ ಸಮುದಾಯಕ್ಕೆ ರಾಜಕೀಯವಾಗಿ ಕಡೆಗಣನೆ ; ಬಿ.ಡಿ.ರವಿಕುಮಾರ್


ಹೊಸನಗರ: 39 ಒಳಪಂಗಡಗಳನ್ನು ಹೊಂದಿರುವ ಮೀನುಗಾರರ ಸಮುದಾಯವನ್ನು ಪರಿಶಿಷ್ಠ ಪಂಗಡ ಗುಂಪಿಗೆ ಸೇರ್ಪಡೆಗೊಳಿಸಬೇಕು ಎಂದು ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಡಿ.ರವಿಕುಮಾರ್ ಆಗ್ರಹಿಸಿದ್ದಾರೆ.


ಅವರು ಬುಧವಾರ ಪಟ್ಟಣದ ಶೀತಲ್ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮೊಗವೀರ, ಬೆಸ್ತ, ಕೋಲಿ, ಕಬ್ಬಲಿಗ, ಅಂಬಿಗ, ಗಂಗಾಮತಸ್ಥ ಮೊದಲಾದ ಹೆಸರಿನಿಂದ ಕರೆಯಲ್ಪಡುವ ಮೀನುಗಾರರ ಸಮುದಾಯ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದೆ. ರಾಜ್ಯದ ಎಲ್ಲಾ ಜಿಲ್ಲೆಗಳೂ ಸೇರಿರಾಜ್ಯದಲ್ಲಿ ಸುಮಾರು 70 ಲಕ್ಷಕ್ಕಿಂತ ಹೆಚ್ಚು ಮೀನುಗಾರ ಸಮುದಾಯದ ಮಂದಿ ಇದ್ದಾರೆ. ನಮ್ಮ ಸಮುದಾಯವನ್ನು ಎಸ್‌ಟಿ ಮೀಸಲಾತಿ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿದ್ದು, ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ಮೂರು ಬಾರಿ ಎಸ್‌ಟಿ ಮೀಸಲಾತಿಗೆ ಪ್ರಸ್ತಾವನೆ ಕಳಿಸಿದೆ. ಆದರೆ, ಕೇಂದ್ರ ಸರಕಾರ ಈ ಪ್ರಸ್ತಾವನೆಯನ್ನು ಇನ್ನೂ ಅನುಮೋದನೆಗೊಳಿಸಿಲ್ಲ. ಇದರಿಂದ ಎಸ್‌ಟಿ ಮೀಸಲಾತಿ ವಂಚಿತ ಸಮುದಾಯದ ಜನರಿಗೆ ಅನ್ಯಾಯವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.


ಒಳನಾಡು ಮೀನುಗಾರರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಮೀನು ಹಿಡಿಯುವ ಗುತ್ತಿಗೆ ಹಕ್ಕಿನ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪುನರ್‌ ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.


ರಾಷ್ಟ್ರೀಯ ಪಕ್ಷಗಳಲ್ಲಿ ಹಲವು ವರ್ಷಗಳಿಂದ ಜನಾಂಗದ ಜನರು ಕಾರ್ಯಕರ್ತರಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ಆಕಾಂಕ್ಷಿಗಳಿಗೆ ಚುನಾವಣೆ ಸಮಯದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗುತ್ತಿಲ್ಲ. ಇದರಿಂದ ರಾಜಕೀಯ ಕ್ಷೇತ್ರದಲ್ಲಿಯೂ ಸಮುದಾಯದ ವ್ಯಕ್ತಿಗಳು ಹಿಂದುಳಿಯುವಂತಾಗಿದೆ. ಸೂಕ್ತ ಸ್ಥಾನಮಾನ ನೀಡಲು ರಾಜಕೀಯ ಪಕ್ಷಗಳು ಮುಂದಾಗಬೇಕು. ಚುನಾವಣೆ ಬಂದಾಗ ಬಳಸಿಕೊಂಡು ಬಳಿಕ ನಿರ್ಲಕ್ಷ್ಯ ತೋರುವ ಮನೋಭಾವ ಅಂತ್ಯಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದರು.


ಸಂಘದರಾಜ್ಯ ಪ್ರಮುಖರಾದ ವೆಂಕಟೇಶ್ ಚಂದಳ್ಳಿ, ಧರ್ಮರಾವ್, ತ.ಮ.ನರಸಿಂಹ, ಗಣಪತಿ ಎಡೇಹಳ್ಳಿ, ಉಮೇಶ್ ಮಳವಳ್ಳಿ, ಗಣಪತಿ, ನಾಗೇಂದ್ರ ಹುಳಿಗದ್ದೆ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

7 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

12 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

21 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago