ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಪಂಚಮಸಾಲಿಗಳಿಂದ ‘ನಮ್ಮ ನಡಿಗೆ ಶಿವಮೊಗ್ಗ ಕಡೆಗೆ’

ರಿಪ್ಪನ್‌ಪೇಟೆ: ಈ ಹಿಂದಿನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ ಅಧಿಕಾರದಲ್ಲಿದ ಸಂದರ್ಭದಲ್ಲಿ ಪಂಚಮಸಾಲಿ ಲಿಂಗಾಯುತರ ಹೋರಾಟಕ್ಕೆ ಮಣಿದು 2ಎ ಮೀಸಲಾತಿ ಘೋಷಿಸಲಾಗಿದ್ದು ಅದನ್ನು ಸಮರ್ಪಕವಾಗಿ ಅನುಷ್ಟಾನ ಮಾಡದೇ ಈವರೆಗೂ ನಮ್ಮ ಮಕ್ಕಳಿಗೆ 2ಎ ಮೀಸಲಾತಿ ಪತ್ರ ಕೈಗೆ ಸಿಗದೇ ವಂಚಿತರನ್ನಾಗಿಸಿದೆ. ಇಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚಮಸಾಲಿ ಲಿಂಗಾಯುತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವ ಶಿಫಾರಸ್ಸು ಮಾಡುವುದು ಮತ್ತು 2ಎ ಮೀಸಲಾತಿಯನ್ನು ಪ್ರಕಟಿಸಬೇಕು ಎಂಬ ಹಕ್ಕೊತ್ತಾಯವನ್ನು ಮಾಡುವ ಉದ್ದೇಶದಿಂದ ಫೆಬ್ರವರಿ 14 ರಂದು ನಮ್ಮ ನಡಿಗೆ ಶಿವಮೊಗ್ಗದ ಕಡೆಗೆ ಎಂಬ ಘೋಷಣೆಯೊಂದಿಗೆ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಲಿಂಗಪೂಜೆ ಮಾಡುವುದರೊಂದಿಗೆ ರಸ್ತೆ ತಡೆ ನಡೆಸುವುದಾಗಿ ಕೂಡಲ ಸಂಗಮ ಪಂಚಮಸಾಲಿ ಲಿಂಗಾಯುತ ಪೀಠದ ಜಗದ್ಗುರು ಜಯಬಸವ ಮೃತ್ತುಂಜಯ ಸ್ವಾಮೀಜಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದರು.

ರಿಪ್ಪನ್‌ಪೇಟೆಯ ಹೆಚ್.ಎಂ.ವರ್ತೇಶ್‌ಗೌಡ ಮತ್ತು ಕೋಡೂರು ಗ್ರಾಮದ ಚಂದ್ರಮೌಳಿಗೌಡರ ಮನೆಯಲ್ಲಿ ಪಂಚಮಸಾಲಿ ಲಿಂಗಾಯಿತ ಉಪಪಂಗಡದ ಮಲೆನಾಡಿನ ಮಲ್ಲೇಗೌಡರ ಸಮಾಜದವರೊಂದಿಗೆ ಸಮಾಲೋಚನೆ ನಡೆಸಿ ಸಮಾಜದ ಸಂಘಟನೆಗೆ ತಾವುಗಳು ಸದಾ ಸಿದ್ದರಾಗುವಂತೆ ಕರೆಕೊಡುವ ಮೂಲಕ ಸರ್ಕಾರದ ವಿರುದ್ಧ ಯಾವುದೇ ಹೋರಾಟ ನಡೆಸಲು ಸನ್ನದ್ದರಾಗಬೇಕು ಮತ್ತು ನಾವು ಯಾವುದೇ ಸರ್ಕಾರದ ವಿರುದ್ದ ಹೋರಾಟ ಮಾಡದೇ ನಮ್ಮ ಹಕ್ಕು ಕೇಳಿ ಈಡೇರಿಸುವಂತೆ ಒತ್ತಾಯಿಸಲು ಈ ಹೋರಾಟವೆಂದರು.

ಪಂಚಮಸಾಲಿ ಲಿಂಗಾಯಿತ ಹೋರಾಟ ವೇದಿಕೆಯ ಸಾಗರ ತಾಲ್ಲೂಕು ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನಗೌಡ ಪ್ರಸ್ತಾವಿಕವಾಗಿ ಮಾತನಾಡಿದರು.
ಕೋಡೂರು ಗ್ರಾಮದ ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಬಿ.ಜಿ. ಚಂದ್ರಮೌಳಿಗೌಡ, ವೇದಾಂತಪ್ಪಗೌಡ, ಈಶ್ವರಪ್ಪಗೌಡ ವಸವೆ, ಚನ್ನಬಸಪ್ಪಗೌಡ ಬ್ರಹ್ಮೇಶ್ವರ, ಹಾಲಪ್ಪಗೌಡ ಚಿಕ್ಕಮಣತಿ, ಶಿವಪ್ಪಗೌಡ, ವಿರೂಪಾಕ್ಷಪ್ಪಗೌಡ, ಜಯಶೀಲಗೌಡ ಹರತಾಳು, ಮಲ್ಲಿಕಾರ್ಜುನ,
ಗಣಪತಿಗೌಡ, ರಿಪ್ಪನ್‌ಪೇಟೆಯಲ್ಲಿ ಜಿ.ಎಂ.ದುಂಡರಾಜಗೌಡ, ಹೆಚ್.ಎಂ.ವರ್ತೇಶ್, ಜೆ.ಎಸ್. ಚಂದ್ರಪ್ಪಗೌಡ, ಡಿ.ಈ.ಮಧೂಸೂದನ್, ಡಿ.ಎಸ್.ರಾಜಾಶಂಕರ್ ಸಮಾಜದ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

12 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

16 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

18 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

19 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago