ಯುವ ಪತ್ರಕರ್ತನ ಟ್ವೀಟ್‌ಗೆ ಮಾಜಿ ಗೃಹ ಸಚಿವರಿಂದಲೂ ಮೆಚ್ಚುಗೆ ! ಸೂಲಿಬೆಲೆಯೂ ಪ್ರಸ್ತಾಪ

ರಿಪ್ಪನ್‌ಪೇಟೆ : ಸದ್ಯ ಶಿವಮೊಗ್ಗದಲ್ಲಿ ಬಾರಿ ಚರ್ಚೆ ಆಗುತ್ತಿರುವ ಈದ್ ಮಿಲಾದ್ ಹಬ್ಬದಲ್ಲಿ ಅಳವಡಿಸಿದ್ದ ಪ್ಲೆಕ್ಸ್ ಗಳ ಬಗ್ಗೆ ರಿಪ್ಪನ್‌ಪೇಟೆ ಯುವ ಪತ್ರಕರ್ತ ರಫಿ ರಿಪ್ಪನ್‌ಪೇಟೆ ಮಾಡಿದ್ದ ಟ್ವೀಟ್ (X) ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ಟ್ವೀಟ್ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ನೇರವಾಗಿ ಕರೆ ಮಾಡಿ ನಿಮ್ಮಂತಹ ವಿಚಾರವಂತರಿಂದ ದಾರಿ ತಪ್ಪುತ್ತಿರುವ ಸಮಾಜವನ್ನು ತಿದ್ದಲು ಸಾಧ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಚಿಂತಕ ಚಕ್ರವರ್ತಿ ಸೂಲಿಬೆಲೆ ಕೂಡ ಮಾಧ್ಯಮಗಳಲ್ಲಿ ಮಾತನಾಡುತ್ತ ರಫಿ ರಿಪ್ಪನ್‌ಪೇಟೆ ರವರ ಟ್ವೀಟ್ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್ ಹಾಕಿದ್ದು ಬಾರಿ ಚರ್ಚೆ ಮಾಡಿತ್ತು.

ಅದರಲ್ಲಿ ರಿಪ್ಪನ್‌ಪೇಟೆ ಯುವ ಪತ್ರಕರ್ತ ಹಾಗೂ ಯುವ ಸಾಹಿತಿ ರಫಿ ರಿಪ್ಪನ್‌ಪೇಟೆ ಯವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ವೊಂದನ್ನು ಮಾಡಿದ್ದರು. ಅವರು ಮಾಡಿದ ಟ್ವೀಟ್ ನಲ್ಲಿ “ಪವಿತ್ರ ಈದ್ ಮಿಲಾದ್ ಹಬ್ಬಕ್ಕೂ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನನಿಗೂ ಏನ್ರೋ ಸಂಬಂಧ, ಇಸ್ಲಾಂ ಧರ್ಮದ ಯುವ ಪೀಳಿಗೆಗೆ ಪ್ರವಾದಿಯವರ ಜೀವನ ಶೈಲಿ ಆದರ್ಶವಾಗಬೇಕೆ ಹೊರತು ಈ ಔರಂಗಜೇಬ್ ಅಥವಾ ಟಿಪ್ಪು ಸುಲ್ತಾನ್ ಅಲ್ಲ. ನೀವು ಹೊಡೆಯುವ ಒಂದೊಂದು ಕಲ್ಲು ನಿಮ್ಮ ಯುವ ಪೀಳಿಗೆಯ ಮುಂದಿನ ಭವಿಷ್ಯವನ್ನೇ ಕಸಿಯುತ್ತಿದೆ” ಎಂದು ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಹಲವರ ಮನಸ್ಸನ್ನು ಕದ್ದಿತು. ನಮ್ಮ ದೇಶಕ್ಕೆ ಇಂತಹ ವ್ಯಕ್ತಿಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಕೂಡ ಆಯಿತು. ಒಟ್ಟಿನಲ್ಲಿ ನಮಗೆ ಆದರ್ಶ ಯಾರು ಎಂಬ ಮಾತನ್ನು ಸಮಾಜದ ಮುಂದೆ ತೆರೆದಿಟ್ಟ ಯುವಪತ್ರಕರ್ತರು ಈಗ ಎಲ್ಲರಿಗೂ ಆದರ್ಶವಾಗಿದ್ದಾರೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

6 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

12 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

21 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago