ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಪೂಜೆಯಲ್ಲಿ ಪಾಲ್ಗೊಂಡ ಭಕ್ತರು


ರಿಪ್ಪನ್‌ಪೇಟೆ: ಪಂಚ ಪೀಠಗಳಲ್ಲೊಂದಾದ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ 1108 ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಮಹಾಭಗವತ್ಪಾದರವರ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ಮಸರೂರು ಗ್ರಾಮದ ರೈತ ಕುಟುಂಬ ಭಾಗವಹಿಸಿ ವಿಶೇಷ ಪೂಜೆ ನೆರವೇರಿಸಿ ಶ್ರೀಗಳವರ ದರ್ಶನಾಶೀರ್ವಾದ ಪಡೆದರು.


ಮಳೆಯಿಲ್ಲದೆ ರೈತಾಪಿ ವರ್ಗ ಕಂಗಾಲಾಗಿದ್ದು ಬೆಳೆ ಸಂಪೂರ್ಣ ಒಣಗುವಂತಾಗಿ ದಿಕ್ಕು ತೋಚದ ಸ್ಥಿತಿ ತಲುಪುವಂತಾಗಿದೆ. ಇಷ್ಟಲಿಂಗ ಮಹಾಪೂಜೆಯಿಂದ ಲೋಕೋದ್ದಾರವಾಗುವಂತಾಗಲಿ ಮಳೆ ಸಂವೃದ್ದವಾಗಿ ಸುರಿದು ರೈತರ ಫಸಲು ಸಂವೃದ್ದಿಯಾಗಿ ಬೆಳೆಯಲೆಂದು ರೈತ ಕುಟುಂಬಕ್ಕೆ ಅರೋಗ್ಯ ಐಶ್ವರ್ಯ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥಿಸಿ ಆಶೀರ್ವದಿಸಿದರು.


ಈ ಸಂದರ್ಭದಲ್ಲಿ ಮಸರೂರು ಎಂ.ಆರ್.ಆಶೋಕ್‌ಗೌಡ, ಎಂ.ಎಸ್.ಜಗದೀಶ್ ಮತ್ತು ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ಗಜಾನನ ಸೇವೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ್ ಹಾಡಿಮನೆ ಅವಿರೋಧ ಆಯ್ಕೆ


ಹೊಸನಗರ: ಪಟ್ಟಣದ ಕೋರ್ಟ್ ಸರ್ಕಲ್ ಆವರಣದಲ್ಲಿ 43ನೇ ವರ್ಷದ ಗಣಪತಿ ವಿಗ್ರಹ ಪ್ರತಿಷ್ಠಾಪಿಸುವ ಶ್ರೀ ಗಜಾನನ ಸೇವೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ್ ಹಾಡಿಮನೆಯವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸುಮಾರು 41 ವರ್ಷಗಳ ಕಾಲ ವಿಜೃಂಭಣೆಯಿಂದ ಗಣಪತಿ ವಿಗ್ರಹವನ್ನು ಪ್ರತಿಷ್ಟಾಪಿಸಿ ಅದ್ದೂರಿ ಮನರಂಜನೆ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡು ಬರುತ್ತಿದ್ದು ಕೊರೋನ ಸಂದರ್ಭದಲ್ಲಿ 2 ವರ್ಷ ವಿಜೃಂಭಣೆ ಕಾರ್ಯಕ್ರಮ ನಡೆಸದೇ ಹಾಗೇಯೇ ಪ್ರತಿಷ್ಠಾಪಿಸಿ ವಿಸರ್ಜಿಸಲಾಗಿತ್ತು ಆದರೆ ಈ ವರ್ಷ ಅದ್ಧೂರಿ ಮನರಂಜನೆ ಕಾರ್ಯಕ್ರಮದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ 11 ದಿನಗಳ ಕಾಲ ಪ್ರತಿದಿನ ಪೂಜೆ ಮನರಂಜನೆ ಕಾರ್ಯಕ್ರಮವನ್ನು ಏರ್ಪಡಿಸುವ ಉದ್ದೇಶದಿಂದ ಗಜಾನನ ಸೇವೆ ಸಮಿತಿಯ ಅಧ್ಯಕ್ಷರನ್ನಾಗಿ ಗೋಪಾಲ್ ಹಾಡಿಮನೆಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಗೋಪಾಲ್ ಹಾಡಿಮನೆ


ಗೌರವಾಧ್ಯಕ್ಷರಾಗಿ ಕಟ್ಟೆ ಸುರೇಶ್, ಉಪಧ್ಯಾಕ್ಷರಾಗಿ ಟಿ.ಆರ್. ಶ್ರೀನಿವಾಸ್, ಕಾರ್ಯದರ್ಶಿಯಾಗಿ ಟಿ.ಆರ್ ಸುನೀಲ್‌ಕುಮಾರ್, ಖಜಾಂಚಿಯಾಗಿ ಕಂಕ್ರು ನಾಗರಾಜ್, ಸಹ ಕಾರ್ಯದರ್ಶಿಯಾಗಿ ಹೆಚ್.ಎಸ್. ಹರೀಶ್‌ರವರನ್ನು ಆಯ್ಕೆ ಮಾಡಲಾಗಿದ್ದು ನಿರ್ದೇಶಕರುಗಳಾಗಿ ಮನೋಹರ ಪಿ, ದಿನೇಶ ಹೆಚ್.ಎಸ್, ದ್ಯಾವರ್ಸ ಸುರೇಶ್, ಕುಮಾರ ಗೌಡ, ಚಂದ್ರಶೇಖರ ಎನ್, ರಾಘವೇಂದ್ರ ಹೆಚ್.ಆರ್, ಶ್ರೀಪತಿರಾವ್, ಮಂಜುನಾಥ ಹೆಚ್.ಎಸ್, ಹೆಚ್.ಎಂ ನಿತ್ಯಾನಂದ, ಮಲ್ಲಿಕಾರ್ಜುನ ಎ.ವಿ, ವಕೀಲ ಗುರುಕಿರಣ್, ಮಂಜುನಾಥ, ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ, ಸುಗಂಧರಾಜ್, ನಾಗೇಶ ಕೆ.ಜಿ, ರಾಮು ಆಚಾರಿ, ಮಂಜುನಾಥ ಎಂ, ಶೀತಲ್ ಹೋಟೆಲ್ ಮಾಲೀಕ ಶ್ರೀನಿವಾಸ್, ಸುಬ್ರಹ್ಮಣ್ಯ, ಗೋಪಿ, ಸತೀಶ, ಆರುಣಾ, ಎಂ.ಪಿ. ಲೋಹಿತ್‌ರವನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago