ರಾಜ್ಯ ಸರ್ಕಾರಿ ನೌಕರರಿಂದ NPS ರದ್ದುಗೊಳಿಸುವಂತೆ ಒತ್ತಾಯಿಸಿ ಮನವಿ

0 343

ರಿಪ್ಪನ್‌ಪೇಟೆ : ರಾಜ್ಯ ಸರ್ಕಾರಿ ನೌಕರರ ಎನ್.ಪಿ.ಎಸ್. ಸಂಘದ ನಿರ್ದೇಶನದಂತೆ ಸಂಘದ ನಡೆ ಶಾಸಕರ ಕಡೆ ಆಂದೋಲನದ ಅನ್ವಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರುರವರನ್ನು ಭೇಟಿ ಮಾಡಿ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಎನ್.ಪಿ.ಎಸ್. ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲು ಹೊಸನಗರ ತಾಲೂಕು ಎನ್.ಪಿ.ಎಸ್. ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಕಾರಾತ್ಮಕ ಸ್ಪಂದಿಸಿ, ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಹಾಗೂ ನಮ್ಮ ಸರ್ಕಾರ ನಿಶ್ಚಿತಾ ಹಳೆ ಪಿಂಚಣಿಯನ್ನು ಮರು ಜಾರಿ ಮಾಡಲು ಬದ್ದವಾಗಿದೆ ಎಂದು ಹೇಳಿದರು.

ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದ ಅಧೀಕ್ಷಕ ಹಾಗೂ ರಾಜ್ಯ ಘಟಕದ ಉಪಾಧ್ಯಕ್ಷ ಡಾ. ರಜನಿಕಾಂತ ಎಸ್. ಟಿ., ಹೊಸನಗರ ತಾಲೂಕು ಅಧ್ಯಕ್ಷ ಮಾಲತೇಶ ಎಂ ಹಾಗೂ ತಾಲೂಕು ಪದಾಧಿಕಾರಿಗಳು ಹಾಗೂ ತಾಲೂಕು NPS ನೌಕರರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!