Categories: Hosanagara News

ರಾಮಚಂದ್ರಪುರ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ


ಹೊಸನಗರ: ತಾಲ್ಲೂಕು ರಾಮಚಂದ್ರಪುರ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯು ಬುಧವಾರ ನಡೆದಿದ್ದು ಕಪಿಲ ಪೈನಾನ್ಸ್ ಮಾಲೀಕರಾದ ಸುಬ್ರಹ್ಮಣ್ಯ ಅಧ್ಯಕ್ಷರಾಗಿ ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ರುಕ್ಮೀಣಿ ಕೃಷ್ಣಮೂರ್ತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣೆ ಪ್ರಕ್ರಿಯೆಯನ್ನು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕರಾದ ಪುಟ್ಟನಾಯ್ಕರವರು ನಡೆಸಿದರು.


ಅಭಿವೃದ್ಧಿಯೊಂದೆ ನನ್ನ ಗುರಿ :
ಹಿಂದಿನ ಅವಧಿಯಲ್ಲಿ ಆರಗ ಜ್ಞಾನೇಂದ್ರರವರ ಸಹಕಾರದೊಂದಿಗೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ 80% ಕಾರ್ಯವನ್ನು ಮುಗಿಸಿದ್ದು ಒಂದು ಸುಗ್ರಾಮ ಪಂಚಾಯಿತಿಯನ್ನು ಮಾಡುವ ಗುರಿಯನ್ನು ನಾನು ಹೊಂದಿದ್ದು ನನಗೆ ಎಲ್ಲ ಸದಸ್ಯರ ಬೆಂಬಲವಿದೆ ನಮ್ಮಲ್ಲಿ ಯಾವುದೇ ಮನಸ್ತಾಪಗಳಿಲ್ಲ ಮುಂದಿನ ಎರಡುವರೆ ವರ್ಷದಲ್ಲಿ ಹೊಸನಗರ ತಾಲ್ಲೂಕಿಗೆ ಅಭಿವೃದ್ದಿ ಪಥದಲ್ಲಿ ಮೊದಲ ಸ್ಥಾನಕ್ಕೆ ಈ ಗ್ರಾಮ ಪಂಚಾಯತಿಯನ್ನು ತೆಗೆದುಕೊಂಡು ಹೋಗುವ ಗುರಿಯನ್ನು ಹೊಂದಿದ್ದೇನೆ ನನಗೆ ಗ್ರಾಮ ಪಂಚಾಯಿತಿಯ ಸದಸ್ಯರ ಹಾಗೂ ಸಿಬ್ಬಂದಿಗಳ ಜೊತೆಗೆ ಗ್ರಾಮದ ಗ್ರಾಮಸ್ಥರ ಸಹಕಾರ ಮಾಡಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪಿಡಿಓ ಗೋಪಾಲ್, ಸದಸ್ಯರಾದ ರತ್ನಮ್ಮ, ಪಾರ್ವತಮ್ಮ, ಗುರುಮೂರ್ತಿ, ಗ್ರಾಮಸ್ಥರಾದ ಸುಬ್ರಹ್ಮಣ್ಯ, ಶಿವಪ್ಪ, ಕೃಷ್ಣಮೂರ್ತಿ ಜಯರಾಮ್ ವಿಶ್ವನಾಥ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago