ಹೊಸನಗರ : ಜ್ಯೂನಿಯರ್ ವಿಭಾಗದಲ್ಲಿ ಕೆಲಕಾಲ ರಾಷ್ಟ್ರೀಯ ವಾಲಿಬಾಲ್ ತರಬೇತಿದಾರ ಆಗಿ ಸೇವೆ ಸಲ್ಲಿಸಿದ್ದ, ವಾಲಿಬಾಲ್ ಜೋನ ಎಂದು ರಾಜ್ಯವ್ಯಾಪ್ತಿ ಖ್ಯಾತರಾಗಿದ್ದ ಪಟ್ಟಣದ ಕ್ರಿಸ್ಚಿಯನ್ ಕಾಲೋನಿ ನಿವಾಸಿ ಜಾನ್ ವಿಲ್ಸನ್ ಗೋನ್ಸಾಲ್ವಿಸ್ (59) ಶಿವಮೊಗ್ಗದಲ್ಲಿ ನಿಧನ ಹೊಂದಿದ್ದಾರೆ.
ಕೆಲವು ದಶಕಗಳ ಹಿಂದೆ ಬಟ್ಟೆಗಳ ಬ್ಯಾನರ್ ಮೇಲೆ ತಮ್ಮ ಮುದ್ದು ಅಕ್ಷರಗಳ ಬರೆಯುವ ಮೂಲಕ ಬದುಕು ಕಟ್ಟಿಕೊಂಡಿದ್ದ ಅವರು, ನಂತರ ಸ್ಥಳೀಯ ಖಾಸಗಿ ಶಾಲೆಗಳಲ್ಲಿ ವಾಲಿಬಾಲ್ ತರಬೇತುದಾರರಾಗಿ ಸೇವೆ ಸಲ್ಲಿಸಿ, ತಾಲೂಕು, ಜಿಲ್ಲೆಯ ಅನೇಕ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಪಟುಗಳನ್ನಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ವಾಲಿಬಾಲ್ ಕ್ರೀಡಾ ವಿಭಾಗದ ರಾಷ್ಟ್ರೀಯ ತರಬೇತುದಾರ ಹಾಗೂ ತೀರ್ಪುಗಾರ ಆಗಿದ್ದ ಜಾನ್, ಉತ್ತಮ ಸ್ನೇಹ ಜೀವಿ. ಈ ಹಿಂದೆ ಪಟ್ಟಣದ ಶ್ರೀನಿಧಿ ಫೈನಾಸ್ಸ್, ಸ್ಪೋಟ್ಸ್ ಅಸೋಸಿಯೇಷನ್, ಕುವೆಂಪು ವಿದ್ಯಾಸಂಸ್ಥೆಗಳಲ್ಲಿ ತಮ್ಮ ಸೇವೆ ಸಲ್ಲಿಸಿದ್ದರು. ಮೃತರು ಕೆಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಸ್ಥಳೀಯ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಮೃತರ ಆತ್ಮಕ್ಕೆ ಶಾಂತಿ ಕೋರಿವೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…