ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ

ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು.

ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಸಮಾಜದ ನೂರಾರು ಜನರು ರಾಮನಾಮ ಸ್ಮರಣೆಯೊಂದಿಗೆ ಭವ್ಯಮೆರವಣಿಗೆ ನಡೆಸುವುದರೊಂದಿಗೆ ರಾಮೋತ್ಸವವನ್ನು ಸಂಭ್ರಮಿಸಿ ಭಕ್ತ ಸಮೂಹದಿಂದ ರಾಮಭಕ್ತಿ ಸುಧೆ ಮೊಳಗಿಸಿದರು.

ದೇವಸ್ಥಾನದಲ್ಲಿ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರ ಪೂಜೆಯೊಂದಿಗೆ `ಶ್ರೀರಾಮತಾರಕ’ಹವನ ಪೂಜೆಯೊಂದಿಗೆ ಮಹಿಳೆಯರಿಂದ ಶ್ರೀರಾಮ ಭಜನೆ ಮತ್ತು ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆಯೊಂದಿಗೆ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾದವರು ಸಾಮೂಹಿಕ ಅನ್ನಸಂತರ್ಪಣೆ ನಡೆಸಿದರೆ ತುಮಕೂರಿನ ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಭಕ್ತವೃಂದ ರಿಪ್ಪನ್‌ಪೇಟೆ ಇವರಿಂದ ಪಾನಕ ಸೇವೆ ಮತ್ತು ಹಿಂದೂ ಜಾಗರಣಾ ವೇದಿಕೆ ಮತ್ತು ವಿಶ್ವಹಿಂದೂ ಪರಿಷತ್ ಇವರಿಂದ ಪಾನಕ, ಕೋಸಂಬರಿ, ರಾಜಸ್ಥಾನಿ ಬಳಗದವರಿಂದ ಕೇಸರಿ ಶ್ರೀರಾಮ ಶಾಲು ವಿತರಣೆ ಜರುಗಿತು.

ಪಾನಕ ಮತ್ತು ಕೋಸಂಬರಿಯ ವಿರಣೆಗೆ ಪಿಎಸ್‌ಐ ಎಸ್.ಪ್ರವೀಣ್‌ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಎಸ್.ಬಿ.ಸಮಾಜದ ಅಧ್ಯಕ್ಷ ಗಣೇಶ್ ಎನ್.ಕಾಮತ್, ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಅಧ್ಯಕ್ಷ ಈಶ್ವರಶೆಟ್ಟಿ, ದೇವಸ್ಥಾನ ಸಭಾಭವನ ಕಟ್ಟಡ ಸಮಿತಿ ಅಧ್ಯಕ್ಷ ಎನ್.ಸತೀಶ್, ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯ ಅಧ್ಯಕ್ಷ ನಾಗರಾಜ ಪವಾರ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಆರ್.ಟಿ.ಗೋಪಾಲ, ತುಳೋಜಿರಾವ್, ಸುಧೀಂದ್ರ ಪೂಜಾರಿ, ವೈ.ಜೆ.ಕೃಷ್ಣ, ಆರ್.ರಾಘುವೇಂದ್ರ, ವಿಶ್ವಹಿಂದು ಪರಿಷತ್‌ನ ರಂಜಿತ್, ಕಾರ್ತಿಕ ಎನ್.ನಾಯಕ್, ಎಂ.ಸುರೇಶ್‌ಸಿಂಗ್, ತಾ.ಪಂ.ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಎನ್.ಮಂಜುನಾಥ ಕಾಮತ್, ಹರೀಶ್‌ಪ್ರಭು, ಕೆ.ವಿ.ಲಿಂಗಪ್ಪ, ಮುರುಳಿ ಕೆರೆಹಳ್ಳಿ ಲಕ್ಷ್ಮಣ ಬಳ್ಳಾರಿ, ಸುಧೀರ್, ರೇಖಾರವಿ, ಶೀಲಾ, ಕುಷನ್ ದೇವರಾಜ್, ಈಶ್ವರ, ಸುಹಾಸ್, ಹೆಚ್.ಎನ್.ಚೋಳರಾಜ್, ರವಿ ಶಬರೀಶನಗರ, ರಮೇಶ್ ಫ್ಯಾನ್ಸಿ, ಕೆ.ಬಿ.ಹೋವಪ್ಪ, ಲಕ್ಷ್ಮಿ ಶ್ರೀನಿವಾಸ್ ಆಚಾರಿ, ಶ್ರೀನಿವಾಸ ಆಚಾರ್, ಇನ್ನಿತರ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿನಾಯಕ ದೇವಸ್ಥಾನದ ಅವರಣದಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾ ಪ್ರತಿಷ್ಟಾಪನಾ ಕಾರ್ಯಕ್ರಮದ ನೇರಪ್ರಸಾರದ ಪ್ರದರ್ಶನ ಜರುಗಿತು. ನಂತರ ಜೈ ಶ್ರೀರಾಮ ಜಯಜಯರಾಮ ಜಯ ಘೋಷಣೆಯೊಂದಿಗೆ ದೇವಸ್ಥಾನದಿಂದ ಮೆರವಣಿಗೆ ನಡೆಸಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

7 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

10 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

11 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

16 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

17 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago