ರಿಪ್ಪನ್ಪೇಟೆ ; ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಾ.19 ರಂದು ಕರೆಂಟ್ ಇರಲ್ಲ !
ರಿಪ್ಪನ್ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಮಾ. 19 ರಂದು ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಶಿವಮೊಗ್ಗದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯ ನಿಮಿತ್ತ ಅಂದು ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆವರೆಗೆ ರಿಪ್ಪನ್ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರು ಸಹಕರಿಸುವಂತೆ ರಿಪ್ಪನ್ಪೇಟೆ ಮೆಸ್ಕಾಂ ಉಪ ಶಾಖೆಯ ಇಂಜಿನಿಯರ್ ತಿಳಿಸಿದ್ದಾರೆ.