ರಿಪ್ಪನ್‌ಪೇಟೆ ವಿವಿಧೆಡೆ ಶಿವನಾಮ ಸ್ಮರಣೆ

0 217

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನ, ಬೈರಾಪುರ ಉದ್ಭವ ಕಂತೆ ಸಿದ್ದೇಶ್ವರ ದೇವಸ್ಥಾನ, ಕೋಡೂರು ಶ್ರೀ ಶಂಕರೇಶ್ವರ ದೇವಸ್ಥಾನ, ಬರುವೆ ಕಲಾನಾಥ ರಾಮೇಶ್ವರ ದೇವಸ್ಥಾನ, ಹುಂಚದ ಕಮಟೇಶ್ವರ ದೇವಸ್ಥಾನ, ಹಾಲುಗುಡ್ಡೆಯ ಹಾಲರಾಮೇಶ್ವರ ದೇವಸ್ಥಾನ, ಗವಟೂರು ರಾಮೇಶ್ವರ ದೇವಸ್ಥಾನ ಮತ್ತು ಕುಕ್ಕಳಲೇ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಇಂದು ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.

ಗುಳುಗುಳಿ ಶ್ರೀ ಶಂಕರೇಶ್ವರ ದೇವಸ್ಥಾನದಲ್ಲಿ ಭಕ್ತರು ಶಿವಲಿಂಗಕ್ಕೆ ಜಲಾಭಿಷೇಕ ಮಾಡುತ್ತಿರುವುದು.

ಮುಂಜಾನೆಯಿಂದಲೇ ಭಕ್ತರು ತಂಡೋಪ ತಂಡವಾಗಿ ದೇವಸ್ಥಾನಗಳಿಗೆ ತೆರಳಿ ಶಿವನಾಮ ಸ್ಮರಣೆಯನ್ನು  ಜಪಿಸಿದರು.
ದೇವಸ್ಥಾನಗಳಲ್ಲಿ ಭಕ್ತರ ಸಮೂಹ ಸರತಿ ಸಾಲಿನಲ್ಲಿ ನಿಂತು ತಮ್ಮ ಇಷ್ಟಾರ್ಥವನ್ನು ಈಡೇರಿಸುವಂತೆ ಶಿವನಲ್ಲಿ ಪ್ರಾರ್ಥಿಸುತ್ತಿರುವುದು ವಿಶೇಷವಾಗಿತ್ತು.

Leave A Reply

Your email address will not be published.

error: Content is protected !!