ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ: 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು.

ಕೋಡೂರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಉಮೇಶ್ ಕೆ.ಎಸ್. ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಸ್.ಸಿ.ಎಸ್.ಟಿ, ಹಾಸ್ಟೆಲ್‌ನಲ್ಲಿ ಮೇಲ್ವಿಚಾರಕ ರಾಘವೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಗುರುರಾಜ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಎ.ಮಂಜುನಾಥ, ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಪ್ರಾಚಾರ್ಯ ಟಿ.ಚಂದ್ರಶೇಖರ್, ಶ್ರೀಬಸವೇಶ್ವರ ವಿದ್ಯಾಲಯದಲ್ಲಿ, ಗುಡ್‌ಶಫರ್ಡ್ ಶಾಲೆ, ಮೇರಿ ಮಾತಾ ಪ್ರೌಢಶಾಲೆಯಲ್ಲಿ, ಶ್ರೀಶಾರದ ರಾಮಕೃಷ್ಣ ವಿದ್ಯಾಲಯದಲ್ಲಿ ಹಾಗೂ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಆರ್.ಎಫ್.ಓ ಬಾಬುರಾಜೇಂದ್ರ ಪ್ರಸಾದ್, ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಹುಂಚ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷೆ, ಕೋಡೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷ ಉಮೇಶ್, ಅಮೃತ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಬೆಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಬಾಳೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಅರಸಾಳು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು 75ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.

ಕೋಡೂರಿನ ಬ್ಲಾಸ್ಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಅದ್ದೂರಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಧ್ವಜಾರೋಹಣ ನೆರವೇರಿಸಿದರು.
ಕೋಡೂರಿನ ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಅದ್ದೂರಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಧ್ವಜಾರೋಹಣ ನೆರವೇರಿಸಿದರು.
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago