ರೈತರು, ಸೈನಿಕರು, ಶಿಕ್ಷಕರು ದೇಶದ ಬೆನ್ನೆಲುಬು ; ಮಾಜಿ ಸೈನಿಕ ಕೃಷ್ಣಪ್ಪ ಎಂ

ರಿಪ್ಪನ್‌ಪೇಟೆ : ರೈತರು, ಸೈನಿಕರು ಮಬ ಶಿಕ್ಷಕರು ದೇಶದ ಬೆನ್ನೆಲುಬು ಎಂದು ಮಾಜಿ ಸೈನಿಕ ಕೃಷ್ಣಪ್ಪ ಎಂ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌಡಕೊಪ್ಪದಲ್ಲಿ ಇಂದು ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರೈತರು ದೇಶಕ್ಕೆ ಅನ್ನವನ್ನು ನೀಡಿದರೆ ಶಿಕ್ಷಕರು ಸದೃಢ ಸಮಾಜವನ್ನು ಮತ್ತು ದೇಶವನ್ನು ಕಟ್ಟವ ಕಾರ್ಯ ಮಾಡುತ್ತಾರೆ. ಸೈನಿಕರು ದೇಶವನ್ನು ಕಾಯುವುದರ ಮೂಲಕ ದೇಶದಲ್ಲಿನ ಜನರನ್ನು ಸುರಕ್ಷಿತವಾಗಿ ಇರುವಂತೆ ನೋಡಿಕೊಳ್ಳುತ್ತಾರೆ ಎಂದು ತಿಳಿಸಿ, ಯುವಕರಿಗೆ ಸೈನ್ಯಕ್ಕೆ ಸೇರಲು ಕರೆ ನೀಡಿದರು.

ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿನ ಅವರ ಅನುಭವಗಳನ್ನು ಹಂಚಿಕೊಳ್ಳುವುದರ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯು ತನ್ನದೇ ಆಗಿರುವಂತಹ ಕೊಡುಗೆಯನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು.

ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಘು ಪೂಜಾರಿ ಮಾತನಾಡಿ, ಈಗಿನ ದಿನಮಾನಗಳಲ್ಲಿ ಮೊಬೈಲ್ ಹಾವಳಿಯಿಂದ ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಓದು ಬರೆಯುವ ಕೌಶಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್ ಅನ್ನು ಬಿಟ್ಟು ಪುಸ್ತಕವನ್ನು ಹಿಡಿಯುವುದರ ಮೂಲಕ ದೇಶಕ್ಕೆ ಗುರುತರವಾದ ಕಾಣಿಕೆ ನೀಡಲು ಸಲಹೆ ನೀಡಿದರು.

ಮುಖ್ಯ ಶಿಕ್ಷಕಿ ಅಂಬಿಕಾ ಸಂತೋಷ್ ಮಾತನಾಡಿ, ಪ್ರೇರಣಾ ಸ್ವಯಂಸೇವಾ ಸಂಘ ಪ್ರತಿ ವರ್ಷ ನಮ್ಮ ಸುತ್ತಮುತ್ತ ಇರುವ ಮಾಜಿ ಮತ್ತು ಹಾಲಿ ಸೈನಿಕರನ್ನು ಗುರುತಿಸಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿರುವುದು ಅತ್ಯಂತ ಅರ್ಥ ಪೂರ್ಣ ಕಾರ್ಯಕ್ರಮ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶೋಭಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸುಮಿತ್ರಾ, ಸದಸ್ಯರಾದ ಆಶಾ, ಗಿರೀಶ್, ಸರಿತಾ ಹಾಗೂ ಪ್ರೇರಣಾ ಸ್ವಯಂಸೇವಾ ಸಂಘದ ಸದಸ್ಯರಾದ ಕೀರ್ತಿ, ಪ್ರಶಾಂತ, ದಿನೇಶ, ಶಾರದಾ, ಮತ್ತಿತರರು ಉಪಸ್ಥಿತರಿದ್ದರು.

Malnad Times

Recent Posts

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ !

ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…

53 mins ago

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

3 hours ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

5 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

14 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

15 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

15 hours ago