ಲೋಕಕಲ್ಯಾಣಾರ್ಥ ಸಾಮೂಹಿಕ ಸತ್ಯನಾರಾಯಣ ಪೂಜೆ, ರಕ್ಷಾ ಸುದರ್ಶನ ಹೋಮ

ರಿಪ್ಪನ್‌ಪೇಟೆ: ಉತ್ತರಾಯಣ ಪುಣ್ಯಕಾಲದಲ್ಲಿ ಸೂರ್ಯ ತನ್ನ ಪಥವನ್ನು ಬದಲಿಸುವ ಮೂಲಕ ನಮ್ಮಲ್ಲಿರುವ ಕತ್ತಲನ್ನು ದೂರ ಮಾಡಿ ಬೆಳಕಿನೆಡೆಗೆ ಸಾಗಿಸುವ ಇಂತಹ ಪುಣ್ಯ ಕಾಲದ ಸಂದರ್ಭದಲ್ಲಿ ಲೋಕಕಲ್ಯಾಣಾರ್ಥ ರಕ್ಷಾಸುದರ್ಶನ ಹೋಮ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆಯಿಂದ ಭಕ್ತರಲ್ಲಿ ಪುಣ್ಯ ಪ್ರಾಪ್ತಿಯಾಗುವುದೆಂದು ಗಂಗೊಳ್ಳಿಯ ವೇದ ವಿದ್ವಾನ ಜಗದೀಶ್‌ಭಟ್ ಹೇಳಿದರು.

ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಸಮಾಜದವರು ಮಕರ ಸಂಕ್ರಾಂತಿಯ ಅಂಗವಾಗಿ ಆಯೋಜಿಸಲಾದ “ರಕ್ಷಾ ಸುದರ್ಶನ ಹೋಮ ಸಾಮೂಹಿಕ ಸತ್ಯನಾರಾಯಣ ಪೂಜೆ’’ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಸಮಾಜದ ಸಂಘಟನೆಗೆ ಇಂತಹ ಧಾರ್ಮಿಕ ಆಚರಣೆಗಳು ಸಹಕಾರಿಯಾಗುವುದರೊಂದಿಗೆ ಸಮಜದ ಏಳಿಗೆ ಸಾಮರಸ್ಯವನ್ನು ಬೆಳೆಸಿಕೊಳ್ಳಲು ಪೂರಕವಾಗುವುದೆಂದರು.

ಸಮಾಜದ ಹಿರಿಯರನ್ನು ಸನ್ಮಾನಿಸಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಸನ್ನಭಟ್, ಜಿ.ಎಸ್.ಬಿ.ಸಮಾಜದ ಅಧ್ಯಕ್ಷ ಗಣೇಶ್ ಎನ್.ಕಾಮತ್, ಮಹಿಳಾ ಮಂಡಳಿಯ ಆಧ್ಯಕ್ಷೆ ರಾಧಿಕಾ ರಾಮದಾಸ್‌ನಾಯಕ್, ಜೆ.ರಾಧಾಕೃಷ್ಣ, ಆರ್.ಉಮೇಶ್, ಡಿ.ನರಸಿಂಹಕಾಮತ್, ಹರೀಶ್ ಶಂಕರ ಶರಾಫ್, ಹರೀಶ್‌ಪ್ರಭು, ಸತೀಶ್‌ಕಿಣಿ ಇನ್ನಿತರ ಸಮಾಜದ ಪ್ರಮುಖರು ಪಾಲ್ಗೊಂಡಿದರು.

ರಾಜಸ್ಥಾನಿಗಳಿಂದ ದೇಗುಲದ ಆವರಣ ಸ್ವಚ್ಚತಾ ಸೇವೆ


ರಿಪ್ಪನ್‌ಪೇಟೆ: ಇಲ್ಲಿನ ಶಿವಮೊಗ್ಗ–ಕುಂದಾಪುರ ಮಾರ್ಗದ ಬೈರಾಪುರ ಕಂತೆ ಸಿದ್ದೇಶ್ವರ ದೇವಸ್ಥಾನದ ಮುಂಭಾಗದ ಅವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ರಾಜಸ್ತಾನಿ ಸಮಾಜದವರು ಭಾನುವಾರ ಮುಂಜಾನೆ ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದರು.


ದೇಶದ ಪ್ರಧಾನಿ ನರೇಂದ್ರ ಮೋದಿಯವರು ತಾವು ದೇವಸ್ಥಾನವನ್ನು ಸ್ವಚ್ಚಗೊಲಿಸುವ ಮೂಲಕ ಕರೆ ನೀಡಿದಂತೆ ರಾಷ್ಟ್ರ ವ್ಯಾಪಿ ದೇಗುಲ ಸ್ವಚ್ಚತಾ ಅಭಿಯಾನ ಹಿನ್ನಲೆ ಇಲ್ಲಿನ ಬೈರಾಪುರದಲ್ಲಿ ರಾಜಸ್ಥಾನಿ ಸಮಾಜದವರು ಸ್ವಪ್ರೇರಣೆಯಿಂದ ಸ್ವಚ್ಚಗೊಳಿಸುವ ಮೂಲಕ ಗಮನಸೆಳೆದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago