Categories: Hosanagara News

ವಾಟ್ಸಾಪ್ ಸ್ಟೇಟಸ್‌ನಲ್ಲಿ ತನ್ನದೇ ನಗ್ನಚಿತ್ರ ಅಪ್‌ಲೋಡ್ ; ಗ್ರಾ.ಪಂ. ಸದಸ್ಯತ್ವ ರದ್ದುಗೊಳಿಸಲು ಆಗ್ರಹ


ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸದಸ್ಯ ತನ್ನ ತನ್ನದೇ ನಗ್ನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿರುವುದು ನಾಚಿಗೆ ಗೇಡಿನ ವಿಷಯವಾಗಿದ್ದು ಇವರ ಗ್ರಾಮ ಪಂಚಾಯತಿ ಸದಸ್ಯತ್ವ ವಜಾ ಮಾಡಬೇಕೆಂದು ವಸವೆ ರಮೇಶ್‌ರವರ ನೇತೃತ್ವದಲ್ಲಿ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಗ್ರಾಮ ಪಂಚಾಯತಿ ಪಿಡಿಓರವರಿಗೆ ದೂರು ಸಲ್ಲಿಸಿ ತಕ್ಷಣ ಸದಸ್ಯತ್ವವನ್ನು ವಜಾ ಮಾಡಬೇಕೆಂದು ಮನವಿ ಸಲ್ಲಿಸಿದ್ದಾರೆ.


ಗ್ರಾಮಸ್ಥರು ನೀಡಿರುವ ಮನವಿ ಪತ್ರದಲ್ಲಿ, ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವಸವೆ ಗ್ರಾಮದ ಗ್ರಾ.ಪಂ ಸದಸ್ಯ ಧರ್ಮಪ್ಪ ವೈ (48) ಇವರು ಮೇ 18 ರಂದು ಸುಮಾರು 2 ಯಿಂದ 3 ಗಂಟೆಗಳ ಕಾಲ ತಮ್ಮ ಮೊಬೈಲ್ ನಂಬರ್ 944*****27 ವಾಟ್ಸಪ್ ಸ್ಟೇಟಸ್ ನಲ್ಲಿ ತನ್ನ ನಗ್ನ ಚಿತ್ರವನ್ನು ಪ್ರದರ್ಶಿಸಿದ್ದು ಸಮಾಜದಲ್ಲಿ ಗೌರವ ಘನತೆಗೆ ಕುಂದು ತಂದಿದ್ದಲ್ಲದೇ ನಮಗೆ ಇದರಿಂದಾಗಿ ಮಾನಸಿಕವಾಗಿ ತುಂಬಾ ಆಘಾತವಾಗಿದ್ದು ಹಾಗೂ ನಮಗೆ ಸಮಾಜದಲ್ಲಿ ತಲೆ ಎತ್ತಿ ತಿರುಗಾಡಂತಾಗಿದೆ. ಮಹಿಳೆಯರು ಮತ್ತು ಮಕ್ಕಳು ಈ ಚಿತ್ರವನ್ನು ನೋಡಿ ಗಂಡಸರ ಬಗ್ಗೆ ತೀರ ಕೀಳು ಮಟ್ಟದಲ್ಲಿ ನೋಡುತ್ತಿದ್ದಾರೆ ಮೊಬೈಲ್‌ಗಳನ್ನು ಮಕ್ಕಳು ಆನ್‌ಲೈನ್ ತರಗತಿಗಾಗಿ ನೋಡುತ್ತಿದ್ದು ಈ ಚಿತ್ರವನ್ನು ಚಿಕ್ಕ ಮಕ್ಕಳು ನೋಡಿ ತೀರ ಆಘಾತಕ್ಕೆ ಒಳಗಾಗಿರುತ್ತಾರೆ. ಇದರಿಂದ ನಮ್ಮ ಮನಸ್ಸಿಗೆ ತೀರ ಹಿಂಸೆ ಹಾಗೂ ನೋವುಂಟಾಗಿದೆ. ನಮ್ಮ ಮಕ್ಕಳು ನಮಗೆ ಈ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೇ ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಸಂಪೂರ್ಣ ಹಾಳಾಗಿದ್ದಲ್ಲದೇ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿದ್ದು ಅವರು ಸಾರ್ವಜನಿಕರಿಗೆ ತಿಳುವಳಿಕೆ ಹೇಳುವ ವ್ಯಕ್ತಿಯಾಗಿದ್ದು ತಾವೇ ಸಮಾಜದಲ್ಲಿ ಇಂಥಹ ಚಿತ್ರಗಳನ್ನು ಬಿತ್ತರಿಸಿ ಸಮಾಜದ ಸಂಪೂರ್ಣ ಸ್ವಾಸ್ಥ್ಯವನ್ನು ಹಾಳು ಮಾಡಿರುತ್ತಾರೆ ಇವರು ನೈತಿಕ ಹೊಣೆಗಾರಿಕೆಯನ್ನು ಹೊತ್ತು ತಕ್ಷಣ ತಮ್ಮ ಗ್ರಾಮ ಪಂಚಾಯತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಮತ್ತು ಅವರ ಮೇಲೆ ಪಂಚಾಯತ್ ರಾಜ್ ನಡತೆಯ ಕಾನೂನಿನನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಗೂ ಪಂಚಾಯತಿ ಸದಸ್ಯತ್ವವನ್ನು ವಜಾ ಮಾಡಬೇಕೆಂದು ತಿಳಿಸಿದ್ದಾರೆ.


ಮನವಿ ಪತ್ರವನ್ನು ನೀಡುವ ಸಂದರ್ಭದಲ್ಲಿ ವಸವೆ ಉಮೇಶ್, ನಕ್ಷತ್ರ ಮಂಜು, ಸಾಲಗೇರಿ ನಾಗರಾಜ್, ಜಯನಗರ ಪ್ರಹ್ಲಾದ, ಶಿವನಂದಪ್ಪ ಗೌಡ, ವಸವೆ ಕೃಷ್ಣಮೂರ್ತಿ, ಕುಂಟಿಕೆ ರತ್ನಾಕರ್, ಸುಧಾಕರ, ಶಿವಕುಮಾರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

1 hour ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

4 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

8 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

21 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

24 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 day ago