ಹೊಸನಗರ : ಚುನಾಯಿತ ಜನಪ್ರತಿನಿಧಿ ಓರ್ವ ತನ್ನ ಮೊಬೈಲ್ ವಾಟ್ಸಾಪ್ ಸ್ಟೇಟಸ್ಗೆ ತನ್ನದೇ ನಗ್ನಚಿತ್ರ ಅಪ್ಲೋಡ್ ಮಾಡುವ ಮೂಲಕ ತಾಲೂಕಿನಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ತಿಳಿದುಬಂದಿದೆ.
ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಸದಸ್ಯನೋರ್ವ ಇದೇ 18ರ ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಸ್ಟೇಟಸ್ನಲ್ಲಿ ತನ್ನದೇ ನಗ್ನಚಿತ್ರ ಅಪ್ಲೋಡ್ ಮಾಡಿದ್ದು, ಸುಮಾರು 2-3 ಗಂಟೆಗಳ ನಂತರ ಡಿಲಿಟ್ ಆಗುವ ಮುನ್ನ ಸಾವಿರಾರು ಮಂದಿ ಈ ಚಿತ್ರವನ್ನು ಡೌನ್ಲೋಡ್ ಮಾಡಿಕೊಂಡು ಈತನ ವಿರುದ್ದ ಹಿಡಿಶಾಪ ಹಾಕುತ್ತಿರುವ ಸಂಗತಿ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಾರ್ವಜನಿಕ ವಲಯದಲ್ಲಿನ ಜವಾಬ್ದಾರಿಯುತ ಜನಪ್ರತಿನಿಧಿಯೋರ್ವ ಹೇಯ್ಯಕೃತ್ಯೆಗೆ ಮುಂದಾಗಿರುವುದು, ಸಮಾಜದ ಸ್ವಾಸ್ಥ್ಯ ಕದಡುವ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಬಂಧಪಟ್ಟ ಇಲಾಖೆ ಈತನ ವಿರುದ್ದ ಸೂಕ್ತ ತನಿಖೆ ನಡೆಸಬೇಕು. ತತಕ್ಷಣವೇ ಜನಪ್ರತಿನಿಧಿ ಸ್ಥಾನದಿಂದ ಈತನನ್ನು ವಜಾಗೊಳಿಸಿ, ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರ ಒತ್ತಾಯ ಕೇಳಿಬರುತ್ತಿದೆ.
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…