Categories: Hosanagara News

ವಿಕಲ ಚೇತನರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ; ಡಾ. ಶಾಂತರಾಜ್


ಹೊಸನಗರ: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿಶೇಷ ವಿಕಲ ಚೇತನರಿಗೆ ಆನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಸರಿಯಾದ ಕ್ರಮದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಹೊಸನಗರದ ಆಡಳಿತ ವೈದ್ಯಾಧಿಕಾರಿ ಡಾ. ಶಾಂತರಾಜ್ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೇಟರ್ ವೆಲ್‌ಫೇರ್ ಸೊಸೈಟಿಯಿಂದ ವಿಶೇಷ ಚೇತನ ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿ, ವಿಶೇಷ ಚೇತನರು ಆರೋಗ್ಯದಲ್ಲಿ ಏರುಪೇರು ಆದಾಗ ತಕ್ಷಣ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕು ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ವಿಕಲ ಚೇತನ ಮಕ್ಕಳಿಗೆ ನೀಡುತ್ತಾ ಬಂದಿದ್ದು ಆದರೆ ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡರೆ ಒಳ್ಳೆಯದು ಎಂದರು.


ವಿಶೇಷ ಚೇತನ ಮಕ್ಕಳು ಓದಿನಲ್ಲಿ ಮುಂದು:


ಇಂದಿನ ಯುವ ಪೀಳಿಗೆಯಲ್ಲಿ ವಿಶೇಷ ಚೇತನ ಮಕ್ಕಳು ಎಲ್ಲ ಕ್ಷೇತ್ರದಲ್ಲಿಯು ಮುಂದಿದ್ದು ಅದರಲ್ಲಿಯೂ ಓದಿನ ವಿಷಯದಲ್ಲಿ ಇತರೆ ಮಕ್ಕಳಿಗಿಂತ ಮುಂದಿರುವುದು ಕಂಡು ಬರುತ್ತಿದೆ ಎಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುರೇಶ್‌ರವರು ಈ ಸಂದರ್ಭದಲ್ಲಿ ಹೇಳಿದ್ದು ಇವರನ್ನು ಯಾವುದೇ ಕಾರಣಕ್ಕೂ ವಿಕಲಚೇತನರನ್ನಾಗಿ ಗುರುತಿಸದೇ ನಮ್ಮ ನಿಮ್ಮ ಹಾಗೇ ಸಾಮಾನ್ಯ ಮಕ್ಕಳಂತೆ ಕಾಣಬೇಕೆಂದರು.


ಈ ಕಿಟ್ ವಿತರಿಸುವ ಸಂದರ್ಭದಲ್ಲಿ ನೇಟರ್ ವೆಲ್‌ಫೆರ್ ಸೊಸೈಟಿಯ ಸಂಚಾಲಕರಾದ ಪ್ರೇಮನಾಥ್, ಆಪ್ತ ಸಮಾಲೋಚಕರಾದ ಸುಷ್ಮಾ ಶ್ರೀನಿವಾಸ್, ಅಭಯಧಾಮ ಕಾರ್ಯಕರ್ತರಾದ ಹಾಲಪ್ಪ ಇನ್ನೂ ಮುಂತದವರು ಉಪಸ್ಥಿತರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago