ಹೊಸನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡುವುದು ನನ್ನ ಬಗ್ಗೆ ಅಪಪ್ರಚಾರ ಮಾಡುವುದು ವಿರೋಧಿಗಳ ಕೆಲಸವಾಗಿದೆ ಅದಕ್ಕೆಲ್ಲ ತಲೆಕೆಡಿಸಿಕೊಳ್ಳದೇ ಚುನಾವಣೆಯ ಕೆಲಸ ಮಾಡಿ ಗೆದ್ದ ಮೇಲೆ ವಿರೋಧಿಗಳಿಗೆ ಅದೇ ಉತ್ತರವಾಗಿರಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಹರತಾಳು ಹಾಲಪ್ಪನವರು ಸಲಹೆ ನೀಡಿದರು.
ಪಟ್ಟಣದ ಬಿಜೆಪಿ ಕಛೇರಿಯ ಆವರಣದಲ್ಲಿ ಟೌನ್ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿಯಲ್ಲಿ ಸಾಕಷ್ಟು ಕಾರ್ಯಕರ್ತರ ಪಡೆಯಿದೆ ಚುನಾವಣೆ ನಾವು ಚುನಾವಣೆ ಎದುರಿಸಲು ನಮಗೆ ಕಷ್ಟವಿಲ್ಲ ಆದರೆ ಉಳಿದಿರುವ 20 ದಿನಗಳು ಹಗಲು, ರಾತ್ರಿ ಮನೆ-ಮನೆಗೆ ತೆರಳಿ ಮತಯಾಚನೆ ಮಾಡಬೇಕು ಹಾಗೂ ನಮ್ಮ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿಯ ಕೆಲಸಗಳನ್ನು ಮಾಡುವುದರ ಜೊತೆಗೆ ಮುಂದೆ ಗ್ರಾಮಗಳಲ್ಲಿ ಯಾವ ಕೆಲಸಗಳು ಬಾಕಿ ಇದೆ ಎಂದು ಪಟ್ಟಿ ಮಾಡಿಕೊಳ್ಳಬೇಕು ಎಂದರು.
ವಿರೋಧಿಗಳು ಎಷ್ಟೆ ಅಪಪ್ರಚಾರ ಮಾಡಿದರೂ ನಾವು ನಮ್ಮ ಕಾರ್ಯಕರ್ತರು ಹೆದರುವ ಪ್ರಶ್ನೆಯೇ ಇಲ್ಲ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ ನಾನು ಹೊಸನಗರ-ಸಾಗರ ಕ್ಷೇತ್ರದಲ್ಲಿ ಗೆದ್ದೆ ಗೆಲ್ಲುತ್ತೇನೆ ಎಂದರು.
ಈ ಸಭೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಉಮೇಶ್ ಕಂಚುಗಾರ್, ಎನ್.ಆರ್ ದೇವಾನಂದ, ಟೌನ್ ಅಧ್ಯಕ್ಷ ಎನ್ ಶ್ರೀಧರ ಉಡುಪ, ಟೌನ್ ಘಟಕದ ಅಧ್ಯಕ್ಷ ಕೋಣೆಮನೆ ಶಿವಕುಮಾರ್, ವಿ.ಸತ್ಯನಾರಾಯಣ, ಸಿಮೆಂಟ್ ವಿ, ಹೆಚ್.ಎಸ್. ಮಂಜುನಾಥ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…
ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…