ಹೊಸನಗರ : ಇಲಾಖೆಯ ಮಾಹಿತಿಯನ್ನು ದಾಖಲಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಹಿಂದೆ ನೀಡಿದ್ದ ಕಳಪೆ ಗುಣಮಟ್ಟದ ಮೊಬೈಲ್ ಫೋನ್ ಅನ್ನು ವಾಪಸ್ಸು ಪಡೆದು, ಗುಣಮಟ್ಟದ ಹೊಸ ಮೊಬೈಲ್ ಅಥವಾ ಟ್ಯಾಬ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಹೊಸನಗರ ತಾಲೂಕು ಅಂಗನವಾಡಿ ಕಾರ್ಯಕತೆಯರ ಹಾಗೂ ಸಹಾಯಕಿಯರ ಸಂಘದ ಸದಸ್ಯರು ಅಧ್ಯಕ್ಷೆ ಶಶಿಕಲಾ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ರಾಜ್ಯ ಸಂಚಾಲಕ ರವೀಂದ್ರ ಸಾಗರ್ ಮಾತನಾಡಿ, ಆರೋಗ್ಯ ಇಲಾಖೆಯೂ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಯ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಿಸಿಕೊಳ್ಳಬಾರದು. ಕೂಡಲೇ ಹಳೇ ಮೊಬೈಲ್ ಫೋನ್ ಹಿಂಪಡೆದು, ಗುಣಮಟ್ಟದ ಟ್ಯಾಬ್ ಅಥವಾ ಹೊಸ ಮೊಬೈಲ್ ನೀಡಬೇಕು. ಇದರಿಂದ ಒತ್ತಡ ಇಲ್ಲದೆ ಸರ್ಕಾರಿ ದಾಖಲೆಗಳನ್ನು ಅಪ್ ಲೋಡ್ ಮಾಡಲು ಸಹಕಾರಿಯಾಗಲಿದೆ. ಕಳಪೆ ಗುಣಮಟ್ದದ ಮೊಟ್ಟೆ ಸರಬರಾಜು ಮಾಡುತ್ತಿರುವ ಟೆಂಡರ್ ಅನ್ನು ಕೈಬಿಟ್ಟು, ಮೊಟ್ಟೆ ಖರೀದಿಗೆ ಬಾಲ ವಿಕಾಸ ಸಮಿತಿಗೆ ವಹಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ ಬಾಕಿ ಇರುವ ಬಾಡಿಗೆ ಹಣವನ್ನು ಕೂಡಲೇ ಪಾವತಿಮಾಡಲು ಕ್ರಮಕೈಗೊಳ್ಳಬೇಕು. ಗ್ಯಾಸ್ ಬಿಲ್, ವಿದ್ಯುತ್ ಬಿಲ್ ಹಾಗೂ ಸುಚಿತ್ವಕ್ಕೆ ಅಗತ್ಯವಿರುವ ವಸ್ತುಗಳ ಖರೀದಿಗಾಗಿ ಸಾಧಿಲ್ವಾರ್, ಪ್ಲಕ್ಸಿ, ಇಸಿಸಿ ಹಣ ಕೂಡಲೇ ಬಿಡುಗಡೆ ಮಾಡಬೇಕು. ದೀರ್ಘಕಾಲ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಅಧಿಕಾಗಳು, ಮೇಲ್ವಿಚಾರಕರನ್ನು ವರ್ಗಾವಣೆ ಮಾಡಬೇಕು. ಸರ್ಕಾರ ಈಗಾಗಲೇ ತನ್ನ ಘೋಷಿಸಿದ್ದ 6ನೇ ಗ್ಯಾರಂಟಿ ಆದ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಮಾಸಿಕ ವೇತನ ರೂ. 15 ಸಾವಿರ ನೀಡಬೇಕು. ರೂ. 10 ಸಾವಿರ ಗೌರವಧನ ಹೆಚ್ಚಿಸಬೇಕು, ನಿವೃತ್ತಿಗೆ ರೂ. 3 ಲಕ್ಷ ಹಣ ಇಡಿಗಂಟು ನೀಡಬೇಕು. ಅಲ್ಲದೆ, ಮಾಸಿಕ ರೂ. 5 ಸಾವಿರ ಪೆನ್ಷನ್ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.
ರಾಜ್ಯ ಫೆಡರೇಷನ್ ಆದೇಶದಂತೆ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದು, ಸರ್ಕಾರ ಈ ಕುರಿತು ಸೂಕ್ತವಾಗಿ ಸ್ಪಂದಿಸದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಸಂಘದ ವತಿಯಿಂದ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ಈ ವೇಳೆ ಸಂಘದ ತಾಲೂಕು ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಎನ್.ಎಸ್. ಗೀತಾ, ಖಜಾಂಚಿ ಹೆಚ್.ಜಿ.ಉಮಾ, ನಾಗರತ್ನ, ರಜತ ಶ್ರೀಪಾಲ್, ಗೀತಾಂಜಲಿ, ರತ್ನ, ಸುಜಾತ, ವೀಣಾ, ಮೊದಲಾದವರು ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…