ರಿಪ್ಪನ್ಪೇಟೆ : ವಿಶ್ವದಲ್ಲೇ ಅತಿದೊಡ್ಡ ಸಂವಿಧಾನ ಭಾರತದ ಸಂವಿಧಾನ ಎಂದು ಹುಂಚ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಂಗಲ ದೇವರಾಜ ಹೇಳಿದರು.
ಹುಂಚ ಗ್ರಾಮಕ್ಕೆ ಫೆ.16 ರಂದು ಮಧ್ಯಾಹ್ನ ಸಂವಿಧಾನ ಜಾಗೃತಿ ಜಾಥಾ ರಥ ಆಗಮಿಸಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನ ಲಿಖಿತ ರೂಪದಲ್ಲಿದೆ. ವಿಶ್ವದ ಎಲ್ಲ ಸಂವಿಧಾನವನ್ನು ಅಧ್ಯಯನ ಮಾಡಿ ದೇಶದ ಎಲ್ಲ ವರ್ಗದವರು ಹಾಗೂ ಎಲ್ಲ ಧರ್ಮದವರನ್ನು ಸೇರಿಸಿಕೊಂಡು ಸಂವಿಧಾನವನ್ನು ರಚಿಸಲಾಯಿತು. ನಮಗೆ ಇಷ್ಟು ಒಳ್ಳೆಯ ಜೀವನ ಸಿಕ್ಕಿದೆ ಅಂದರೆ ಅದಕ್ಕೆ ಸಂವಿಧಾನ ಕಾರಣ ಎಂದು ಹೇಳಿದರು.
ಸಂವಿಧಾನ ಜಾಗೃತಿ ಜಾಥಾ ರಥ ಗ್ರಾಮಕ್ಕೆ ಆಗಮಿಸಿದ್ದಂತೆ ಗ್ರಾ.ಪಂ ವತಿಯಿಂದ ಪೂರ್ಣಕುಂಭ, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವೇಷಭೂಷಣ, ತಬಲ ವಾಧ್ಯಗಳ ಮೂಲಕ ವಿಜೃಂಭಣೆಯಿಂದ ಭರಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರಾದ ದೇವೇಂದ್ರ, ರಾಘವೇಂದ್ರ ತೋಟದಕಟ್ಟು, ಶ್ರೀಧರ ಸುಣಕಲ್ಲು, ರಾಜಶೇಖರ, ಮಂಜುನಾಥ ಪಲ್ಲವಿ, ಚೇತನ್, ಯಶಸ್ವತಿ ಜೈನ್, ಸರೋಜ, ಚಂದ್ರಕಲಾ, ಆಶಾ ಯದು, ಶ್ವೇತಾ, ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಜರಿದ್ದರು.
ಪಿಡಿಒ ರಮೇಶ ಸ್ವಾಗತಿಸಿದರು. ಹುಂಚ ಶಾಲಾ ಶಿಕ್ಷಕ ಕುಮಾರಸ್ವಾಮಿ ನಿರೂಪಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…