Categories: Hosanagara News

ವೈದ್ಯರ ನಿರ್ಲಕ್ಷ್ಯ ; ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ !

ಹೊಸನಗರ : ತಾಲೂಕಿನ ನಗರ ಸಮೀಪದ ಬೈಸೆ ಗ್ರಾಮದ ಬಡ ಕೂಲಿ ಕಾರ್ಮಿಕ ಕುಟುಂಬದ ವ್ಯಥೆ ಇದು. ಏಳು ವರ್ಷದ ಬಾಲಕಿ ಕಳೆದ 22 ದಿನಗಳಿಂದ ಶಾಲೆಗೆ ಹೋಗಲಾಗದ ಸ್ಥಿತಿಯಲ್ಲಿದ್ದಾಳೆ. ಇಂಜೆಕ್ಷನ್ ನಂತರ ಉಂಟಾದ ನೋವಿನಿಂದ ಕಾಲು ಕಳೆದು ಕೊಳ್ಳುವ ಭೀತಿಯಲ್ಲಿದ್ದಾಳೆ.

ಇಲ್ಲಿನ ಸುಳುಗೋಡಿನ ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ದಾರುಣ ಸ್ಥಿತಿ ಇದು. ಎರಡನೇ ತರಗತಿ ವಿದ್ಯಾಭ್ಯಾಸ ನಡೆಸುತ್ತಿರುವ ಶ್ರವಂತಿಗೆ ಮೇ.29 ರಂದು ಜ್ವರ ಕಾಣಿಸಿಕೊಂಡಿತ್ತು. ಅದೇ ರಾತ್ರಿ ನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಆರೋಗ್ಯ ತಪಾಸಣೆಯ ಬಳಿಕ ಮಗುವಿನ ಸೊಂಟಕ್ಕೆ ಇಂಜೆಕ್ಷನ್ ನೀಡಿದ್ದಾರೆ. ಬಳಿಕ ಬಾಲಕಿ ಕಾಲು ಊರಲು ಸಾಧ್ಯವಾಗದೇ. ಇರುವೆ ಹರಿದ ಹಾಗೆ ಆಗುತ್ತದೆ ಎಂದು ರೋಧಿಸಿದ್ದಾಳೆ. ಇದು ಸರಿಯಾಗುತ್ತದೆ ಎಂದು ವೈದ್ಯರು ಹೇಳಿದ್ದರಿಂದ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಬಂದು ರಾತ್ರಿ ಕಳೆದು ಬೆಳಗಾದರೂ ಬಾಲಕಿ ಕಾಲು ಊರಲಾಗದೆ ನರಳಿದ್ದಾಳೆ. ಆತಂಕಗೊಂಡ ಪೋಷಕರು ಮತ್ತೆ ನಗರ ಸರ್ಕಾರಿ ಆಸ್ಪತ್ರೆಗೆ ಮಗಳನ್ನು ಕರೆತಂದಿದ್ದಾರೆ. ವೈದ್ಯರ ಸೂಚನೆ ಮೇರೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ 5 ದಿನ ಚಿಕಿತ್ಸೆ ನೀಡಲಾಗಿದೆ. ಶ್ರವಂತಿಯ ಕಾಲಿನಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ. ಮತ್ತೆ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ 4 ದಿನ ಚಿಕಿತ್ಸೆ ಕೊಡಿಸಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೇ ಬಡ ಕುಟುಂಬ ಚಿಂತೆಗೀಡಾಗಿದೆ.

ಜೂನ್ 1 ರಿಂದ ಶಾಲೆ ಆರಂಭವಾಗಿದ್ದು ಶಾಲೆಗೆ ಹೋಗಲಾಗದೆ ಶ್ರವಂತಿ ಪರಿತಪಿಸುತ್ತಿದ್ದಾಳೆ. ಶಾಲೆಗೆ ಹೋಗುವ ತಯಾರಿಯಲ್ಲಿದ್ದ ಮಗುವಿಗೆ ನಡೆಯಲಾಗದೇ ಮನೆಯಲ್ಲೇ ಕೂರುವಂತಾಗಿದೆ. ವೈದ್ಯರು ಸ್ಪಂದಿಸಿ ಚಿಕಿತ್ಸೆ ನೀಡಿದ್ದರು. ಆಸ್ಪತ್ರೆಗೆ ಒಳ ಹೋಗುವಾಗ ನಡೆದುಕೊಂಡು ಹೋಗಿದ್ದ ಬಾಲಕಿ ವಾಪಾಸು ಬರುವಾಗ ನಡೆಯುತ್ತಿರಲಿಲ್ಲ. ಅವರು ನೀಡಿದ ಇಂಜೆಕ್ಷನ್ ಯಾವುದು, ಚಿಕಿತ್ಸೆ ಹೇಗೆ ಮಾಡಿದ್ದಾರೆ ನಮಗೆ ಗೊತ್ತಿಲ್ಲ. ಆದರೆ ಬಾಲಕಿಯ ಒಂದು ಕಾಲು ಸ್ವಾಧೀನ ಇಲ್ಲ ಎಂದು ಪೋಷಕರು ಗೋಳಿಡುತ್ತಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago