ಹೊಸನಗರ: ಮಾ.4ರಂದು ಶಾಸಕ ಎಚ್.ಹಾಲಪ್ಪ ಅಧ್ಯಕ್ಷತೆಯಲ್ಲಿ ಶರಾವತಿ ಹಿನ್ನೀರು ಸಮೀಪ ಆಯೋಜಿಸಿರುವ ಶರಾವತಿ ಹಿನ್ನೀರು ಹಬ್ಬ ಆಚರಿಸುವ ಔಚಿತ್ಯವೇನು ? ಎಂದು ನಿವೃತ್ತ ಪ್ರಾಚಾರ್ಯ ಸೊನಲೆ ಶ್ರೀನಿವಾಸ್ ಪ್ರಶ್ನಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಮುಳುಗಡೆ ಎನ್ನುವುದು ಮಲೆನಾಡಿನ ಮೂಲ ನಿವಾಸಿಗಳ ರಕ್ತ ಕುಡಿದು ಗಹಗಹಿಸಿದ ರಕ್ಕಸ ಎಂಬ ಭಾವನೆಯಿದೆ. ಊರು, ಕೇರಿ, ಸಂಬಂಧಗಳನ್ನು ದೂರ ಮಾಡಿದ್ದೂ ಅಲ್ಲದೆ, ಮಣ್ಣಿನ ಭಾವನೆಗಳನ್ನೂ ಅಳಿಸಿ ಹಾಕಿದ ಮುಳುಗಡೆ ನಮ್ಮ ಹಿರಿಯರು ಕಣ್ಣೀರು ಹರಿಸಿದ ಘಟನೆ. ಅವರ ಕಣ್ಣೀರೆ ಮುಳುಗಡೆಯಾಗಿ ನಿಂತಿದೆಯೇನೋ ಎಂಬ ಭಾವನೆ ಹಲವು ಬಾರಿ ಹಿನ್ನೀರು ನೋಡಿದಾಗಿ ಉಂಟಾಗುತ್ತದೆ. ಆದರೆ ಆ ನೋವಿನ ದಿನದ ನೆನಪಿನಲ್ಲಿ ಇಂದು ಸಂಭ್ರಮಾಚರಣೆ ಮಾಡಲು ಮುಂದಾಗಿರುವುದು ತೀವ್ರ ಖಂಡನೀಯ ಹಾಗೂ ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿನ ಯುವ ಜನತೆ ಇಂತಹ ಮೌಢ್ಯದ ಆಚರಣೆ ಕುರಿತು ಅವಲೋಕನ ಮಾಡಬೇಕಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು ಎಂದು ಅವರು ಹೇಳಿದ್ದಾರೆ.
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…
ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…
ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು…