Categories: Hosanagara News

ಶರಾವತಿ ಹಿನ್ನೀರ ಹಬ್ಬ | ಬಗರ್ ಹುಕ್ಕುಂ ರೈತರ ಒಂದು ಗುಂಟೆ ಜಮೀನು ಹೋಗಲು ಬಿಡಲ್ಲ ; ಶಾಸಕ ಹಾಲಪ್ಪ ಹರತಾಳು

‘- ಹಿನ್ನೀರನ್ನು ಪನ್ನೀರು ಮಾಡಿ ತೋರಿಸುತ್ತೇವೆ……’

ಹೊಸನಗರ ; ಬಗರ್ ಹುಕ್ಕುಂ ರೈತರ ಒಂದು ಗುಂಟೆ ಜಾಗವೂ ಹೋಗಲು ಬಿಡಲ್ಲ. ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು.


ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ ಸಮಸ್ಯೆ ಉಲ್ಬಣವಾಗಲು ಕಾಂಗ್ರೆಸ್ ನೇರ ಕಾರಣ. ಅಧಿಕಾರ ಇದ್ದಾಗ ಸಮಸ್ಯೆ ಬಗೆಹರಿಸದೇ ಈಗ ನಮ್ಮ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದರು.


ಶರಾವತಿ ನದಿಗೆ ಸೇತುವೆ ಕಟ್ಟುವಲ್ಲಿ ವಿಶೇಷ ಆಸಕ್ತಿ ತೋರಿದ್ದೇನೆ. ಇದೀಗ ಮೂರು ಸೇತುವೆ ಆಗುತ್ತಿದೆ. ಇದು ನಮ್ಮ ಸರ್ಕಾರದ ಹೆಮ್ಮೆ ಆಗಿದೆ ಎಂದರು.


ಹಿನ್ನೀರ ಹಬ್ಬದ ವಿಚಾರದಲ್ಲಿ ವಿರೋಧಿಗಳು ತಮ್ಮ ಮಾತಿನ ಚಪಲತೆ ತೋರಿದ್ದಾರೆ. ನಾಡಿಗೆ ಬೆಳಕು ನೀಡಿದ ಖ್ಯಾತಿ ಶರಾವತಿಗೆ ಇದೆ. ಶರಾವತಿ ನದಿ ದಡದಲ್ಲಿ ಇದ್ದ ನಮಗೆ ಹಬ್ಬ ಆಚರಿಸುವ ಸಂಭ್ರಮ ಇಲ್ಲವೆ ? ನಮ್ಮ ಮಕ್ಕಳು ಏನು ಮಾಡಿದ್ದಾರೆ ? ಇಲ್ಲಿ ಸೇರಿದ ಜನರು ಸಂಭ್ರಮ ಪಡುತ್ತಿದ್ದಾರೆ. ಇಷ್ಟು ಜನ ಕಲೆತು ಸಂಭ್ರಮ ಪಡುವ ಹಬ್ಬದ ಆಚರಣೆ ಕಣ್ಣೀರು ಹೇಗೆ ಆಗುತ್ತದೆ ? ಎಂದು ಪ್ರಶ್ನಿಸಿ ‘ಹಿನ್ನೀರನ್ನು ಪನ್ನೀರು ಮಾಡಿ ತೋರಿಸುತ್ತೇವೆ’ ಎಂದರು.

ಅಂದು ಶರಾವತಿಗೆ ಮೊದಲ ಸೇತುವೆಯಾಗಿ ಸಿಗಂದೂರು ಬಳಿಯ ಮಡೆನೂರು ಹಳ್ಳಿಯಲ್ಲಿ ಸೇತುವೆ ಕಟ್ಟಿದ್ದರು. ಲಿಂಗನಮಕ್ಕಿ – ಮಡೆನೂರು ಸೇತುವೆ ಸೇರಿ ಈ ನದಿಗೆ ಸೇತುವೆ ಮೇಲೊಂದು ಸೇತುವೆಗಳಾಗಿ ಈ ಹಾದಿಗಳೆಲ್ಲಾ ಮುಳುಗಿ ಹೋದವು‌. ನಂತರ ಈ ಸಂಪರ್ಕವೇ ಕಡಿದು ಹೋಯ್ತು. ನಂತರ ಹೊಸ ಹೆದ್ದಾರಿಯನ್ನ ಬಟ್ಟೆಮಲ್ಲಪ್ಪ ಎಂಬ ಊರಿನ ಮೂಲಕ‌ ಸಾಗರಕ್ಕೆ ಸಂಪರ್ಕ ಸಾಧಿಸುವಂತೆ ಮಾಡಿದರು. ಈ ಹೆದ್ದಾರಿ ಸುತ್ತು ಹಾಕಿ ಹೋದರೆ 42 ಕಿಲೋಮೀಟರ್ ಹೆಚ್ಚುವರಿ ಕ್ರಮಿಸಬೇಕಿತ್ತು. ನಾನು ಮೊದಲ ಸಲ ಹೊಸನಗರ ಶಾಸಕನಾದಗ ಜನ ಪಟಗುಪ್ಪ ಸೇತುವೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಈ ಭಾಗದಲ್ಲಿ ಜನ ಸೇತುವೆ ನಿರೀಕ್ಷೆ ಮರೆತ್ತಿದ್ದರು. ‘ಈ ಸೇತುವೆ ಆಗೋದೂ ಒಂದೇ ನಮ್ಮ ಮನೆ ಹುಡುಗನಿಗೆ ಬುದ್ಧಿ ಬರೋದೂ ಒಂದೇ’ ಎಂದು ಆಡಿಕೊಳ್ಳುತ್ತಿದ್ದರು. ನಾನು ಸವಾಲಾಗಿ ಸ್ವೀಕರಿಸಿ ನಿರ್ವಹಿಸಿದೆ. ಅಂದು ಉಪಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ‌ಒತ್ತಾಸೆಯಾಗಿ ನಿಂತರು ಎಂದು ಹಾಲಪ್ಪ ಹೇಳಿದರು.


ಸಭೆಯಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಗಣಪತಿ ಬೆಳಗೋಡು, ಸುರೇಶ್ ಸ್ವಾಮಿರಾವ್, ಲೋಕನಾಥ್, ಗಣೇಶ್ ಪ್ರಸಾದ್ ಇದ್ದರು.
ಎಂ.ಎನ್. ಸುಧಾಕರ್ ಕಾರ್ಯಕ್ರಮ ನಿರ್ವಹಿಸಿದರು.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

2 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

10 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

20 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

21 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

21 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

22 hours ago