ರಿಪ್ಪನ್ಪೇಟೆ: ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರುರವರನ್ನು ಇಂದು ರಿಪ್ಪನ್ಪೇಟೆ ಶ್ರೀಬಸವೇಶ್ವರ ವೀರಶೈವ ಸಮಾಜದವರು ಸಾಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ ಇವರು ಈ ಹಿಂದಿನ ಸರ್ಕಾರದಿಂದ ರಿಪ್ಪನ್ಪೇಟೆಯ ಶಿವಮಂದಿರ ನಿರ್ಮಾಣ ಕಾಮಗಾರಿಗೆ 3 ಕೋಟಿ ರೂ. ಅನುದಾನವನ್ನು ನೀಡಲಾಗಿದ್ದು ಇನ್ನೂ ಸುಮಾರು ಒಂದು ಕೋಟಿಯ ಅನುದಾನದ ಕೊರತೆಯಿದ್ದು ಆರ್ಥಿಕವಾಗಿ ತುಂಬಾ ತೊಂದರೆಯಾಗಿರುವ ಕಾರಣ ಕಾಮಗಾರಿ ಇನ್ನೂ ಅಪೂರ್ಣವಾಗಿಯೇ ಉಳಿದಿದೆ ಆದ್ದರಿಂದ ಸರ್ಕಾರದಿಂದ ಇನ್ನೂ ಹೆಚ್ಚುವರಿ ಆರ್ಥಿಕ ನೆರವು ಕೊಡಿಸುವಂತೆ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿದರು.
ಸಮಾಜದವರ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಸರ್ಕಾರದಿಂದ ಅನುದಾನವನ್ನು ಕೊಡಿಸುವ ಬಗ್ಗೆ ಭರವಸೆ ನೀಡಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಡಿ.ಈ.ಮಧುಸೂದನ್,
ಸಮಾಜದ ಮುಖಂಡರಾದ ಹೆಚ್.ಎಂ.ವರ್ತೇಶ್ಗೌಡ, ಎಲ್.ವೈ.ದಾನೇಶಪ್ಪಗೌಡ, ಬೆಳಕೋಡು ಹಾಲಸ್ವಾಮಿಗೌಡ, ಜೆ.ಎಂ.ಶಾಂತಕುಮಾರ್ ಜಂಬಳ್ಳಿ, ಕೊಳವಳ್ಳಿ ಎಂ.ರಾಜೇಶ್, ಕಮದೂರು ಪರಮೇಶ್, ನೆವಟೂರು ಸ್ವಾಮಿಗೌಡರು, ಈಶ್ವರಪ್ಪ ಗವಟೂರು, ಜಿ.ಡಿ.ಮಲ್ಲಿಕಾರ್ಜುನ ಗವಟೂರು ಇನ್ನಿತರ ಶ್ರೀಬಸವೇಶ್ವರ ವೀರಶೈವ ಸಮಾಜ ಬಾಂಧವರು ಹಾಜರಿದ್ದರು.
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…
ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…