ಹೊಸನಗರ: ಶಿಕ್ಷಕ ವೃತ್ತಿ ನಮಗೆ ದೇವರು ಕೊಟ್ಟ ಕೊಡುಗೆ ಎಂದು ಹೊಸನಗರ ತಾಲ್ಲೂಕು ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇರಪ್ಪನವರು ಹೇಳಿದರು.
ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾರುತಿಪುರ ಶಾಲೆಯ ಆವರಣದಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಪಡೆದ ಬಡ್ತಿ ಶಿಕ್ಷಕ ನರಸಿಂಹಮೂರ್ತಿಯವರನ್ನು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಅವರು ಮಾತನಾಡಿದರು.
ದೇವರು ನಮ್ಮ ಜೀವನವನ್ನು ನಡೆಸಲು ಯಾವುದಾದರೂ ಕೆಲಸ ಮಾಡಲು ಈ ಭೂಮಿಗೆ ಕಳುಹಿಸಿದ್ದಾರೆ ಒಬ್ಬೊಬ್ಬರು ತಮ್ಮ ಜೀವನ ನಿರ್ವಹಣೆ ಮಾಡಲು ಒಂದೊಂದು ಕೆಲಸ ಹುಡುಕಿಕೊಂಡಿರುತ್ತಾರೆ. ಆ ಎಲ್ಲ ಕೆಲಸಗಳಲ್ಲಿ ಶಿಕ್ಷಕರ ಕೆಲಸ ಜಾಸ್ತಿಯಾದರೂ ಶಿಕ್ಷಕ ವೃತ್ತಿ ಮನಸ್ಸಿಗೆ ನೆಮ್ಮದಿ ತಂದಿರುತ್ತದೆ. ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವವರು ಈ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳನ್ನು ಈ ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವವರು ಈ ಶಿಕ್ಷಕರೆ ಎಂದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಕುಬೇರಪ್ಪ ವಹಿಸಿದ್ದರು. ಉಪಾಧ್ಯಕ್ಷೆ ಲಿಲ್ಲಿ ಡಿಸೋಜ, ಸುಶೀಲಮ್ಮ, ನಾಗೇಂದ್ರಪ್ಪ, ನಾರಾಯಣಪ್ಪ, ದೇವೇಂದ್ರಪ್ಪ, ಶಾರದಮ್ಮ, ಶಿಕ್ಷಣ ಇಲಾಖೆಯಿಂದ ಇ.ಸಿ.ಓ ಕರಿಬಸಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಚಿತ್ರ: ಹೊಸನಗರ ತಾಲ್ಲೂಕು ಮಾರುತಿಪುರ ಸಾಲೆಯ ಆವರಣದಲ್ಲಿ ಬಡ್ತಿ ಶಿಕ್ಷಕ ನರಸಿಂಹಮೂರ್ತಿಯವರು ವಯೋನಿವೃತ್ತಿ ಪಡೆದಿದ್ದು ಬಡ್ತಿ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸುತ್ತಿರುವುದು.
ಹೆಚ್.ಎಸ್.ನಾಗರಾಜ್
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…